ಬ್ರೇಕಿಂಗ್ ನ್ಯೂಸ್
29-10-24 01:01 pm Mangalore Correspondent ಕ್ರೈಂ
ಮಂಗಳೂರು, ಅ.29: IIFL Securities Ltd ಕಂಪನಿಯ ಪ್ರತಿನಿಧಿಯೆಂದು ಹೇಳಿಕೊಂಡು ವಾಟ್ಸಪ್ ನಲ್ಲಿ ಪರಿಚಯವಾಗಿದ್ದ ಅಪರಿಚಿತ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೊಬ್ಬರು ಷೇರು ಮಾರುಕಟ್ಟೆ ಹೆಸರಲ್ಲಿ 43 ಲಕ್ಷ ರೂಪಾಯಿ ಹೂಡಿಕೆ ಮಾಡಿ ಮೋಸ ಹೋಗಿದ್ದು, ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
IIFL Securities ನಲ್ಲಿ ಹಣ ತೊಡಗಿಸಿದರೆ, ದೊಡ್ಡ ಮಟ್ಟದಲ್ಲಿ ಲಾಭ ಗಳಿಸಬಹುದೆಂದು ನಂಬಿಕೆ ಹುಟ್ಟಿಸಿದ್ದು, ಇದಕ್ಕಾಗಿ ಷೇರು ಮಾರುಕಟ್ಟೆಯ ಲಿಂಕ್ ಗಳನ್ನು ಕಳಿಸಿಕೊಟ್ಟಿದ್ದ. ಇನ್ವೆಸ್ಟ್ ಮೆಂಟ್ಸ್ ಪ್ಲಾನ್ ಬಗ್ಗೆ ಹೇಳಿ ಈ ಲಿಂಕ್ ಮೂಲಕ ಏಪ್ ಡೌನ್ಲೋಡ್ ಮಾಡಿ, ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದು, ಇದರಂತೆ ಮಂಗಳೂರಿನ ವ್ಯಕ್ತಿ ಏಪ್ ಡೌನ್ಲೋಡ್ ಮಾಡಿ ಹಣ ಹೂಡಿಕೆ ಮಾಡಿದ್ದಾರೆ. ಮಂಜು ಪಚಿಸಿಯಾ ಎಂದು ತನ್ನನ್ನು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿ ಆನಂತರ ಟೆಲಿಗ್ರಾಂ ಏಪ್ ಲಿಂಕ್ ಕಳುಹಿಸಿದ್ದ. ಟೆಲಿಗ್ರಾಂ ಮೂಲಕ ಇಬ್ಬರು ನಿರಂತರ ಸಂಪರ್ಕದಲ್ಲಿದ್ದರು.
ಅಪರಿಚಿತನ ಸೂಚನೆಯಂತೆ, ಸೆ.26ರಿಂದ ಅ.23ರ ವರೆಗೆ ನಿರಂತರವಾಗಿ ಹಣ ಹೂಡಿಕೆ ಮಾಡಿದ್ದಾರೆ. ತನ್ನ ಬರೋಡಾ ಬ್ಯಾಂಕ್ ಖಾತೆಯಿಂದ 22 ಲಕ್ಷ, ಎಸ್ ಬಿಐ ಖಾತೆಯಿಂದ 19.18 ಲಕ್ಷ, ಏಕ್ಸಿಸ್ ಖಾತೆಯಿಂದ 1.50 ಲಕ್ಷ ರೂ. ಹಣವನ್ನು ಐಐಎಫ್ಎಲ್ ಸೆಕ್ಯುರಿಟೀಸ್ ಹೆಸರಲ್ಲಿ ಅಪರಿಚಿತ ವ್ಯಕ್ತಿ ನೀಡಿದ್ದ ಖಾತೆಗಳಿಗೆ ವರ್ಗಾವಣೆ ಮಾಡಿದ್ದರು. ಏಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವಂತೆ ತೋರಿಸುತ್ತಿದ್ದುದರಿಂದ ಅಧಿಕೃತ ಷೇರು ವಹಿವಾಟು ಎಂದು ನಂಬಿದ್ದರು. ಆದರೆ, ಹಣವನ್ನು ಹಿಂತೆಗೆಯಲು ಯತ್ನಿಸಿದಾಗ, ಅಪರಿಚಿತ ವ್ಯಕ್ತಿ 25 ಶೇಕಡಾ ಕಮಿಷನ್ ನೀಡುವಂತೆ ಒತ್ತಡ ಹೇರಿದ್ದಾನೆ. ಕೊನೆಗೆ, ಹಣವನ್ನು ಹಿಂತೆಗೆಯಲು ಸಾಧ್ಯವಾಗದೇ ಇದ್ದಾಗ, ತಾನು ಮೋಸ ಹೋಗಿದ್ದೇನೆ ಎಂದು ತಿಳಿದು ಸೈಬರ್ ಠಾಣೆಗೆ ಬಂದು ದೂರು ನೀಡಿದ್ದಾರೆ.
Fake share market group opened in the name of IIFL Securities, Mangalore man looses 43 lakhs for cyber fraud. Case has been registered at the cyber police station in Mangalore
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm