ಬ್ರೇಕಿಂಗ್ ನ್ಯೂಸ್
29-10-24 01:01 pm Mangalore Correspondent ಕ್ರೈಂ
ಮಂಗಳೂರು, ಅ.29: IIFL Securities Ltd ಕಂಪನಿಯ ಪ್ರತಿನಿಧಿಯೆಂದು ಹೇಳಿಕೊಂಡು ವಾಟ್ಸಪ್ ನಲ್ಲಿ ಪರಿಚಯವಾಗಿದ್ದ ಅಪರಿಚಿತ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೊಬ್ಬರು ಷೇರು ಮಾರುಕಟ್ಟೆ ಹೆಸರಲ್ಲಿ 43 ಲಕ್ಷ ರೂಪಾಯಿ ಹೂಡಿಕೆ ಮಾಡಿ ಮೋಸ ಹೋಗಿದ್ದು, ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
IIFL Securities ನಲ್ಲಿ ಹಣ ತೊಡಗಿಸಿದರೆ, ದೊಡ್ಡ ಮಟ್ಟದಲ್ಲಿ ಲಾಭ ಗಳಿಸಬಹುದೆಂದು ನಂಬಿಕೆ ಹುಟ್ಟಿಸಿದ್ದು, ಇದಕ್ಕಾಗಿ ಷೇರು ಮಾರುಕಟ್ಟೆಯ ಲಿಂಕ್ ಗಳನ್ನು ಕಳಿಸಿಕೊಟ್ಟಿದ್ದ. ಇನ್ವೆಸ್ಟ್ ಮೆಂಟ್ಸ್ ಪ್ಲಾನ್ ಬಗ್ಗೆ ಹೇಳಿ ಈ ಲಿಂಕ್ ಮೂಲಕ ಏಪ್ ಡೌನ್ಲೋಡ್ ಮಾಡಿ, ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದು, ಇದರಂತೆ ಮಂಗಳೂರಿನ ವ್ಯಕ್ತಿ ಏಪ್ ಡೌನ್ಲೋಡ್ ಮಾಡಿ ಹಣ ಹೂಡಿಕೆ ಮಾಡಿದ್ದಾರೆ. ಮಂಜು ಪಚಿಸಿಯಾ ಎಂದು ತನ್ನನ್ನು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿ ಆನಂತರ ಟೆಲಿಗ್ರಾಂ ಏಪ್ ಲಿಂಕ್ ಕಳುಹಿಸಿದ್ದ. ಟೆಲಿಗ್ರಾಂ ಮೂಲಕ ಇಬ್ಬರು ನಿರಂತರ ಸಂಪರ್ಕದಲ್ಲಿದ್ದರು.
ಅಪರಿಚಿತನ ಸೂಚನೆಯಂತೆ, ಸೆ.26ರಿಂದ ಅ.23ರ ವರೆಗೆ ನಿರಂತರವಾಗಿ ಹಣ ಹೂಡಿಕೆ ಮಾಡಿದ್ದಾರೆ. ತನ್ನ ಬರೋಡಾ ಬ್ಯಾಂಕ್ ಖಾತೆಯಿಂದ 22 ಲಕ್ಷ, ಎಸ್ ಬಿಐ ಖಾತೆಯಿಂದ 19.18 ಲಕ್ಷ, ಏಕ್ಸಿಸ್ ಖಾತೆಯಿಂದ 1.50 ಲಕ್ಷ ರೂ. ಹಣವನ್ನು ಐಐಎಫ್ಎಲ್ ಸೆಕ್ಯುರಿಟೀಸ್ ಹೆಸರಲ್ಲಿ ಅಪರಿಚಿತ ವ್ಯಕ್ತಿ ನೀಡಿದ್ದ ಖಾತೆಗಳಿಗೆ ವರ್ಗಾವಣೆ ಮಾಡಿದ್ದರು. ಏಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವಂತೆ ತೋರಿಸುತ್ತಿದ್ದುದರಿಂದ ಅಧಿಕೃತ ಷೇರು ವಹಿವಾಟು ಎಂದು ನಂಬಿದ್ದರು. ಆದರೆ, ಹಣವನ್ನು ಹಿಂತೆಗೆಯಲು ಯತ್ನಿಸಿದಾಗ, ಅಪರಿಚಿತ ವ್ಯಕ್ತಿ 25 ಶೇಕಡಾ ಕಮಿಷನ್ ನೀಡುವಂತೆ ಒತ್ತಡ ಹೇರಿದ್ದಾನೆ. ಕೊನೆಗೆ, ಹಣವನ್ನು ಹಿಂತೆಗೆಯಲು ಸಾಧ್ಯವಾಗದೇ ಇದ್ದಾಗ, ತಾನು ಮೋಸ ಹೋಗಿದ್ದೇನೆ ಎಂದು ತಿಳಿದು ಸೈಬರ್ ಠಾಣೆಗೆ ಬಂದು ದೂರು ನೀಡಿದ್ದಾರೆ.
Fake share market group opened in the name of IIFL Securities, Mangalore man looses 43 lakhs for cyber fraud. Case has been registered at the cyber police station in Mangalore
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm