ಬ್ರೇಕಿಂಗ್ ನ್ಯೂಸ್
29-10-24 01:01 pm Mangalore Correspondent ಕ್ರೈಂ
ಮಂಗಳೂರು, ಅ.29: IIFL Securities Ltd ಕಂಪನಿಯ ಪ್ರತಿನಿಧಿಯೆಂದು ಹೇಳಿಕೊಂಡು ವಾಟ್ಸಪ್ ನಲ್ಲಿ ಪರಿಚಯವಾಗಿದ್ದ ಅಪರಿಚಿತ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೊಬ್ಬರು ಷೇರು ಮಾರುಕಟ್ಟೆ ಹೆಸರಲ್ಲಿ 43 ಲಕ್ಷ ರೂಪಾಯಿ ಹೂಡಿಕೆ ಮಾಡಿ ಮೋಸ ಹೋಗಿದ್ದು, ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
IIFL Securities ನಲ್ಲಿ ಹಣ ತೊಡಗಿಸಿದರೆ, ದೊಡ್ಡ ಮಟ್ಟದಲ್ಲಿ ಲಾಭ ಗಳಿಸಬಹುದೆಂದು ನಂಬಿಕೆ ಹುಟ್ಟಿಸಿದ್ದು, ಇದಕ್ಕಾಗಿ ಷೇರು ಮಾರುಕಟ್ಟೆಯ ಲಿಂಕ್ ಗಳನ್ನು ಕಳಿಸಿಕೊಟ್ಟಿದ್ದ. ಇನ್ವೆಸ್ಟ್ ಮೆಂಟ್ಸ್ ಪ್ಲಾನ್ ಬಗ್ಗೆ ಹೇಳಿ ಈ ಲಿಂಕ್ ಮೂಲಕ ಏಪ್ ಡೌನ್ಲೋಡ್ ಮಾಡಿ, ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದು, ಇದರಂತೆ ಮಂಗಳೂರಿನ ವ್ಯಕ್ತಿ ಏಪ್ ಡೌನ್ಲೋಡ್ ಮಾಡಿ ಹಣ ಹೂಡಿಕೆ ಮಾಡಿದ್ದಾರೆ. ಮಂಜು ಪಚಿಸಿಯಾ ಎಂದು ತನ್ನನ್ನು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿ ಆನಂತರ ಟೆಲಿಗ್ರಾಂ ಏಪ್ ಲಿಂಕ್ ಕಳುಹಿಸಿದ್ದ. ಟೆಲಿಗ್ರಾಂ ಮೂಲಕ ಇಬ್ಬರು ನಿರಂತರ ಸಂಪರ್ಕದಲ್ಲಿದ್ದರು.
ಅಪರಿಚಿತನ ಸೂಚನೆಯಂತೆ, ಸೆ.26ರಿಂದ ಅ.23ರ ವರೆಗೆ ನಿರಂತರವಾಗಿ ಹಣ ಹೂಡಿಕೆ ಮಾಡಿದ್ದಾರೆ. ತನ್ನ ಬರೋಡಾ ಬ್ಯಾಂಕ್ ಖಾತೆಯಿಂದ 22 ಲಕ್ಷ, ಎಸ್ ಬಿಐ ಖಾತೆಯಿಂದ 19.18 ಲಕ್ಷ, ಏಕ್ಸಿಸ್ ಖಾತೆಯಿಂದ 1.50 ಲಕ್ಷ ರೂ. ಹಣವನ್ನು ಐಐಎಫ್ಎಲ್ ಸೆಕ್ಯುರಿಟೀಸ್ ಹೆಸರಲ್ಲಿ ಅಪರಿಚಿತ ವ್ಯಕ್ತಿ ನೀಡಿದ್ದ ಖಾತೆಗಳಿಗೆ ವರ್ಗಾವಣೆ ಮಾಡಿದ್ದರು. ಏಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವಂತೆ ತೋರಿಸುತ್ತಿದ್ದುದರಿಂದ ಅಧಿಕೃತ ಷೇರು ವಹಿವಾಟು ಎಂದು ನಂಬಿದ್ದರು. ಆದರೆ, ಹಣವನ್ನು ಹಿಂತೆಗೆಯಲು ಯತ್ನಿಸಿದಾಗ, ಅಪರಿಚಿತ ವ್ಯಕ್ತಿ 25 ಶೇಕಡಾ ಕಮಿಷನ್ ನೀಡುವಂತೆ ಒತ್ತಡ ಹೇರಿದ್ದಾನೆ. ಕೊನೆಗೆ, ಹಣವನ್ನು ಹಿಂತೆಗೆಯಲು ಸಾಧ್ಯವಾಗದೇ ಇದ್ದಾಗ, ತಾನು ಮೋಸ ಹೋಗಿದ್ದೇನೆ ಎಂದು ತಿಳಿದು ಸೈಬರ್ ಠಾಣೆಗೆ ಬಂದು ದೂರು ನೀಡಿದ್ದಾರೆ.
Fake share market group opened in the name of IIFL Securities, Mangalore man looses 43 lakhs for cyber fraud. Case has been registered at the cyber police station in Mangalore
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm