ಬ್ರೇಕಿಂಗ್ ನ್ಯೂಸ್
02-11-24 10:35 pm Udupi Correspondent ಕ್ರೈಂ
ಉಡುಪಿ, ನ.2: ಐಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಮನೆ ಯಜಮಾನಿಯನ್ನು ಕೆಲಸದಾಕೆಯೇ ಯಾಮಾರಿಸಿ, 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನಕ್ಲೇಸನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಶಿವಳ್ಳಿ ಗ್ರಾಮದ ನಿವಾಸಿ ಜ್ಯೂಲಿಯಟ್ ಎಂಬವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಕೆಲಸದಾಕೆ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಸುನೀತಾ ಅವರು ಜೂಲಿಯೆಟ್ಗೆ ಗಂಡನಿಗೆ ವಿಚ್ಛೇದನ ಕೊಡುವಂತೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್ ಮನೆ ಬಿಟ್ಟು ಹೋಗಲು ನಿರ್ಧರಿಸಿದ್ದರು. ಈ ನಡುವೆ, ತಾಯಿಯನ್ನು ಮನೆಗೆ ಬರಲು ಹೇಳಿ ಅ.10ರಂದು ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.
ಅ.29ರಂದು ಬೆಳಗ್ಗೆ ಜ್ಯೂಲಿಯೆಟ್ ಮನೆಯಲ್ಲಿದ್ದಾಗಲೇ ಸುನೀತಾ ಅವರು ಸ್ಟ್ಯಾನಿ ಎಂಬವರೊಂದಿಗೆ ಮನೆಗೆ ಬಂದು ಐ.ಟಿ. ಅಧಿಕಾರಿಗಳು ಬಂದಿದ್ದಾರೆ. ನಿಮ್ಮ ಮನೆಗೆ ರೈಡ್ ಮಾಡುತ್ತಾರೆ. ಲಾಕರ್ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆದುಕೊಡಿ, ಇಲ್ಲಾಂದ್ರೆ ಎತ್ಕೊಂಡು ಹೋಗುತ್ತಾರೆ ಎಂದು ಹೇಳಿ ಲಾಕರ್ ಕೀ ಪಡೆದಿದ್ದಾಳೆ. ಬಳಿಕ ಲಾಕರಿನಲ್ಲಿದ್ದ ಹಣದಲ್ಲಿ 1.50 ಲಕ್ಷ ರೂ.ಗಳನ್ನು ಜ್ಯೂಲಿಯೆಟ್ ಅವರ ಬ್ಯಾಗ್ ಗೆ ಹಾಕಿ ಉಳಿದ 7 ಲಕ್ಷ 50 ಸಾವಿರ ರೂ. ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನೆಕ್ಲೆಸ್ ಅನ್ನು ತನ್ನ ಚೀಲದಲ್ಲಿ ಹಾಕಿಕೊಂಡು, ಸದ್ಯಕ್ಕೆ ಇದು ನನ್ನಲ್ಲಿ ಇರಲಿ, ಆನಂತರ ಕೊಡುತ್ತೇನೆ ಎಂದು ಹೇಳಿ ಒಯ್ದಿದ್ದರು.
ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಸುನೀತಾ ಹಾಗೂ ಸ್ಟಾನಿ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವುದಾಗಿ ಜೂಲಿಯೆಟ್ ಪೊಲೀಸ್ ದೂರು ನೀಡಿದ್ದಾರೆ.
A housemaid allegedly made off with Rs 7.5 lac in cash and a diamond necklace valued at Rs 3 lac, deceiving her employer by claiming an impending IT raid at her residence under the jurisdiction of Manipal police station.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm