ಬ್ರೇಕಿಂಗ್ ನ್ಯೂಸ್
02-11-24 10:35 pm Udupi Correspondent ಕ್ರೈಂ
ಉಡುಪಿ, ನ.2: ಐಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಮನೆ ಯಜಮಾನಿಯನ್ನು ಕೆಲಸದಾಕೆಯೇ ಯಾಮಾರಿಸಿ, 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನಕ್ಲೇಸನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಶಿವಳ್ಳಿ ಗ್ರಾಮದ ನಿವಾಸಿ ಜ್ಯೂಲಿಯಟ್ ಎಂಬವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಕೆಲಸದಾಕೆ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಸುನೀತಾ ಅವರು ಜೂಲಿಯೆಟ್ಗೆ ಗಂಡನಿಗೆ ವಿಚ್ಛೇದನ ಕೊಡುವಂತೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್ ಮನೆ ಬಿಟ್ಟು ಹೋಗಲು ನಿರ್ಧರಿಸಿದ್ದರು. ಈ ನಡುವೆ, ತಾಯಿಯನ್ನು ಮನೆಗೆ ಬರಲು ಹೇಳಿ ಅ.10ರಂದು ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.
ಅ.29ರಂದು ಬೆಳಗ್ಗೆ ಜ್ಯೂಲಿಯೆಟ್ ಮನೆಯಲ್ಲಿದ್ದಾಗಲೇ ಸುನೀತಾ ಅವರು ಸ್ಟ್ಯಾನಿ ಎಂಬವರೊಂದಿಗೆ ಮನೆಗೆ ಬಂದು ಐ.ಟಿ. ಅಧಿಕಾರಿಗಳು ಬಂದಿದ್ದಾರೆ. ನಿಮ್ಮ ಮನೆಗೆ ರೈಡ್ ಮಾಡುತ್ತಾರೆ. ಲಾಕರ್ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆದುಕೊಡಿ, ಇಲ್ಲಾಂದ್ರೆ ಎತ್ಕೊಂಡು ಹೋಗುತ್ತಾರೆ ಎಂದು ಹೇಳಿ ಲಾಕರ್ ಕೀ ಪಡೆದಿದ್ದಾಳೆ. ಬಳಿಕ ಲಾಕರಿನಲ್ಲಿದ್ದ ಹಣದಲ್ಲಿ 1.50 ಲಕ್ಷ ರೂ.ಗಳನ್ನು ಜ್ಯೂಲಿಯೆಟ್ ಅವರ ಬ್ಯಾಗ್ ಗೆ ಹಾಕಿ ಉಳಿದ 7 ಲಕ್ಷ 50 ಸಾವಿರ ರೂ. ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನೆಕ್ಲೆಸ್ ಅನ್ನು ತನ್ನ ಚೀಲದಲ್ಲಿ ಹಾಕಿಕೊಂಡು, ಸದ್ಯಕ್ಕೆ ಇದು ನನ್ನಲ್ಲಿ ಇರಲಿ, ಆನಂತರ ಕೊಡುತ್ತೇನೆ ಎಂದು ಹೇಳಿ ಒಯ್ದಿದ್ದರು.
ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಸುನೀತಾ ಹಾಗೂ ಸ್ಟಾನಿ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವುದಾಗಿ ಜೂಲಿಯೆಟ್ ಪೊಲೀಸ್ ದೂರು ನೀಡಿದ್ದಾರೆ.
A housemaid allegedly made off with Rs 7.5 lac in cash and a diamond necklace valued at Rs 3 lac, deceiving her employer by claiming an impending IT raid at her residence under the jurisdiction of Manipal police station.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm