ಬ್ರೇಕಿಂಗ್ ನ್ಯೂಸ್
02-11-24 10:35 pm Udupi Correspondent ಕ್ರೈಂ
ಉಡುಪಿ, ನ.2: ಐಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಮನೆ ಯಜಮಾನಿಯನ್ನು ಕೆಲಸದಾಕೆಯೇ ಯಾಮಾರಿಸಿ, 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನಕ್ಲೇಸನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಶಿವಳ್ಳಿ ಗ್ರಾಮದ ನಿವಾಸಿ ಜ್ಯೂಲಿಯಟ್ ಎಂಬವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಕೆಲಸದಾಕೆ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಸುನೀತಾ ಅವರು ಜೂಲಿಯೆಟ್ಗೆ ಗಂಡನಿಗೆ ವಿಚ್ಛೇದನ ಕೊಡುವಂತೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್ ಮನೆ ಬಿಟ್ಟು ಹೋಗಲು ನಿರ್ಧರಿಸಿದ್ದರು. ಈ ನಡುವೆ, ತಾಯಿಯನ್ನು ಮನೆಗೆ ಬರಲು ಹೇಳಿ ಅ.10ರಂದು ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.
ಅ.29ರಂದು ಬೆಳಗ್ಗೆ ಜ್ಯೂಲಿಯೆಟ್ ಮನೆಯಲ್ಲಿದ್ದಾಗಲೇ ಸುನೀತಾ ಅವರು ಸ್ಟ್ಯಾನಿ ಎಂಬವರೊಂದಿಗೆ ಮನೆಗೆ ಬಂದು ಐ.ಟಿ. ಅಧಿಕಾರಿಗಳು ಬಂದಿದ್ದಾರೆ. ನಿಮ್ಮ ಮನೆಗೆ ರೈಡ್ ಮಾಡುತ್ತಾರೆ. ಲಾಕರ್ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆದುಕೊಡಿ, ಇಲ್ಲಾಂದ್ರೆ ಎತ್ಕೊಂಡು ಹೋಗುತ್ತಾರೆ ಎಂದು ಹೇಳಿ ಲಾಕರ್ ಕೀ ಪಡೆದಿದ್ದಾಳೆ. ಬಳಿಕ ಲಾಕರಿನಲ್ಲಿದ್ದ ಹಣದಲ್ಲಿ 1.50 ಲಕ್ಷ ರೂ.ಗಳನ್ನು ಜ್ಯೂಲಿಯೆಟ್ ಅವರ ಬ್ಯಾಗ್ ಗೆ ಹಾಕಿ ಉಳಿದ 7 ಲಕ್ಷ 50 ಸಾವಿರ ರೂ. ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನೆಕ್ಲೆಸ್ ಅನ್ನು ತನ್ನ ಚೀಲದಲ್ಲಿ ಹಾಕಿಕೊಂಡು, ಸದ್ಯಕ್ಕೆ ಇದು ನನ್ನಲ್ಲಿ ಇರಲಿ, ಆನಂತರ ಕೊಡುತ್ತೇನೆ ಎಂದು ಹೇಳಿ ಒಯ್ದಿದ್ದರು.
ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಸುನೀತಾ ಹಾಗೂ ಸ್ಟಾನಿ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವುದಾಗಿ ಜೂಲಿಯೆಟ್ ಪೊಲೀಸ್ ದೂರು ನೀಡಿದ್ದಾರೆ.
A housemaid allegedly made off with Rs 7.5 lac in cash and a diamond necklace valued at Rs 3 lac, deceiving her employer by claiming an impending IT raid at her residence under the jurisdiction of Manipal police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm