ಬ್ರೇಕಿಂಗ್ ನ್ಯೂಸ್
05-11-24 05:05 pm HK News Desk ಕ್ರೈಂ
ಹಾಸನ, ನ 05: ಪೊಲೀಸ್ ಕಾನ್ಸ್ಟೇಬಲ್ವೋರ್ವರನ್ನು ಬೀಕರವಾಗಿ ಕೊಚ್ಚಿ ಕೊಲೆಗೈದಿರುವ ಪ್ರಕರಣ ಹಾಸನ ತಾಲೂಕಿನ ದುದ್ದ ಸಮೀಪ ಸೋಮವಾರ ರಾತ್ರಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ಹರೀಶ್ (32) ಕೊಲೆಯಾದವರು.
ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರೀಶ್, ಇದೇ ನವೆಂಬರ್ 11ರಂದು ನಿಶ್ಚಯವಾಗಿದ್ದ ಯುವತಿಯ ಜೊತೆ ಸಪ್ತಪದಿ ತುಳಿಯಬೇಕಿತ್ತು.
ಸೋಮವಾರ ರಾತ್ರಿ ತನ್ನ ಸ್ನೇಹಿತರಿಗೆ, ಸಂಬಂಧಿಕರಿಗೆ ಲಗ್ನಪತ್ರಿಕೆ ಕೊಟ್ಟು ಹರೀಶ್ ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ದುದ್ದ ಹೊರವಲಯದ ಸ್ಕೈ ಲ್ಯಾಂಡ್ ಹೋಟೆಲ್ ಸಮೀಪ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸೋಇಚ್ಛೆ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಎಸ್ಪಿ ಮಹಮದ್ ಸುಜಿತಾ ಹಾಗೂ ದುದ್ದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈಗಾಗಲೇ ಮೂವರು ಆರೋಪಿಗಳನ್ನು ಗುರುತಿಸಿರುವ ಪೊಲೀಸರು, ಇಂದು ಸಂಜೆಯೊಳಗೆ ಪ್ರಮುಖ ಆರೋಪಿಯನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Police constable brutal murder in Hassan. The deceased has been identified as Harish. He was about to get married and was on his way home giving wedding invitation cards to his family members.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm