ಬ್ರೇಕಿಂಗ್ ನ್ಯೂಸ್
10-11-24 10:53 pm Mangalore Correspondent ಕ್ರೈಂ
ಮಂಗಳೂರು, ನ.10: ಹುಡುಗಿ ಹುಡುಕಿ ಬಂದನೆಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನಿಗೆ ಯುವಕರ ತಂಡವೊಂದು ಕಟ್ಟಿ ಹಾಕಿ ಥಳಿಸಿ ಚಿತ್ರಹಿಂಸೆ ಕೊಟ್ಟು ನೈತಿಕ ಪೊಲೀಸ್ ಗೂಂಡಾಗಿರಿ ಮೆರೆದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಚಿನಡ್ಕ ಪದವಿನಲ್ಲಿ ನಡೆದಿದೆ.
ಮಹಮ್ಮದ್ ಮುಸ್ತಾಫ (21) ಎಂಬ ಯುವಕನಿಗೆ ಕಟ್ಟಿ ಹಾಕಿ ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ನ.8ರಂದು ಘಟನೆ ನಡೆದಿದ್ದು ರಾತ್ರಿ ವೇಳೆ ಸ್ಥಳೀಯರು ಗುಂಪು ಸೇರಿ ಹಲ್ಲೆಗೈದಿದ್ದಾರೆ. ಮಹಮ್ಮದ್ ಮುಸ್ತಾಫ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಮ್ಮದ್ ಮುಸ್ತಾಫನಿಗೆ ದೂರದ ಸಂಬಂಧಿಯಾಗಿರುವ ಹುಡುಗಿಯೊಬ್ಬಳು ಕಂಚಿನಡ್ಕ ಪದವಿನ ತನ್ನ ಮನೆಗೆ ಬರಹೇಳಿದ್ದು ಅದರಂತೆ ತೆರಳಿದ್ದ ಯುವಕನಿಗೆ ಸ್ಥಳೀಯ ಯುವಕರು ಸೇರಿ ಕಟ್ಟಿ ಹಾಕಿ ಥಳಿಸಿದ್ದಾರೆ. ಮುಖ, ಕೈಯಲ್ಲಿ ರಕ್ತ ಬರುವಷ್ಟು ಥಳಿಸಿದ್ದು ಆತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಗುಂಪು ಹಲ್ಲೆ ನಡೆಸಿದ ಕಂಚಿನಡ್ಕಪದವು ನಿವಾಸಿಗಳಾದ ಮಹಮ್ಮದ್ ಸಫ್ವಾನ್ (25), ಮಹಮ್ಮದ್ ರಿಜ್ವಾನ್ (25), ಇರ್ಫಾನ್ (27), ಅನೀಸ್ ಅಹ್ಮದ್(19), ನಾಸೀರ್ (27) ಮತ್ತು ಶಾಕೀರ್ (18) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕಲಂ 115(2), 126(2), 189(2), 190, 191(2), 351 (2), 352, 109, 117 (4) ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ.
Youth stripped naked, assulted for visiting girls house at night at bengare in Mangalore, Video viral. Mohammed Mustafa, a resident of Bengare in Mangaluru, was reportedly attacked by a mob who tied him to a pole, stripped him half-naked.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm