ಬ್ರೇಕಿಂಗ್ ನ್ಯೂಸ್
10-11-24 10:53 pm Mangalore Correspondent ಕ್ರೈಂ
ಮಂಗಳೂರು, ನ.10: ಹುಡುಗಿ ಹುಡುಕಿ ಬಂದನೆಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನಿಗೆ ಯುವಕರ ತಂಡವೊಂದು ಕಟ್ಟಿ ಹಾಕಿ ಥಳಿಸಿ ಚಿತ್ರಹಿಂಸೆ ಕೊಟ್ಟು ನೈತಿಕ ಪೊಲೀಸ್ ಗೂಂಡಾಗಿರಿ ಮೆರೆದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಚಿನಡ್ಕ ಪದವಿನಲ್ಲಿ ನಡೆದಿದೆ.
ಮಹಮ್ಮದ್ ಮುಸ್ತಾಫ (21) ಎಂಬ ಯುವಕನಿಗೆ ಕಟ್ಟಿ ಹಾಕಿ ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ನ.8ರಂದು ಘಟನೆ ನಡೆದಿದ್ದು ರಾತ್ರಿ ವೇಳೆ ಸ್ಥಳೀಯರು ಗುಂಪು ಸೇರಿ ಹಲ್ಲೆಗೈದಿದ್ದಾರೆ. ಮಹಮ್ಮದ್ ಮುಸ್ತಾಫ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಮ್ಮದ್ ಮುಸ್ತಾಫನಿಗೆ ದೂರದ ಸಂಬಂಧಿಯಾಗಿರುವ ಹುಡುಗಿಯೊಬ್ಬಳು ಕಂಚಿನಡ್ಕ ಪದವಿನ ತನ್ನ ಮನೆಗೆ ಬರಹೇಳಿದ್ದು ಅದರಂತೆ ತೆರಳಿದ್ದ ಯುವಕನಿಗೆ ಸ್ಥಳೀಯ ಯುವಕರು ಸೇರಿ ಕಟ್ಟಿ ಹಾಕಿ ಥಳಿಸಿದ್ದಾರೆ. ಮುಖ, ಕೈಯಲ್ಲಿ ರಕ್ತ ಬರುವಷ್ಟು ಥಳಿಸಿದ್ದು ಆತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಗುಂಪು ಹಲ್ಲೆ ನಡೆಸಿದ ಕಂಚಿನಡ್ಕಪದವು ನಿವಾಸಿಗಳಾದ ಮಹಮ್ಮದ್ ಸಫ್ವಾನ್ (25), ಮಹಮ್ಮದ್ ರಿಜ್ವಾನ್ (25), ಇರ್ಫಾನ್ (27), ಅನೀಸ್ ಅಹ್ಮದ್(19), ನಾಸೀರ್ (27) ಮತ್ತು ಶಾಕೀರ್ (18) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕಲಂ 115(2), 126(2), 189(2), 190, 191(2), 351 (2), 352, 109, 117 (4) ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ.
Youth stripped naked, assulted for visiting girls house at night at bengare in Mangalore, Video viral. Mohammed Mustafa, a resident of Bengare in Mangaluru, was reportedly attacked by a mob who tied him to a pole, stripped him half-naked.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm