ಬ್ರೇಕಿಂಗ್ ನ್ಯೂಸ್
10-11-24 10:53 pm Mangalore Correspondent ಕ್ರೈಂ
ಮಂಗಳೂರು, ನ.10: ಹುಡುಗಿ ಹುಡುಕಿ ಬಂದನೆಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನಿಗೆ ಯುವಕರ ತಂಡವೊಂದು ಕಟ್ಟಿ ಹಾಕಿ ಥಳಿಸಿ ಚಿತ್ರಹಿಂಸೆ ಕೊಟ್ಟು ನೈತಿಕ ಪೊಲೀಸ್ ಗೂಂಡಾಗಿರಿ ಮೆರೆದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಚಿನಡ್ಕ ಪದವಿನಲ್ಲಿ ನಡೆದಿದೆ.
ಮಹಮ್ಮದ್ ಮುಸ್ತಾಫ (21) ಎಂಬ ಯುವಕನಿಗೆ ಕಟ್ಟಿ ಹಾಕಿ ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ನ.8ರಂದು ಘಟನೆ ನಡೆದಿದ್ದು ರಾತ್ರಿ ವೇಳೆ ಸ್ಥಳೀಯರು ಗುಂಪು ಸೇರಿ ಹಲ್ಲೆಗೈದಿದ್ದಾರೆ. ಮಹಮ್ಮದ್ ಮುಸ್ತಾಫ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಮ್ಮದ್ ಮುಸ್ತಾಫನಿಗೆ ದೂರದ ಸಂಬಂಧಿಯಾಗಿರುವ ಹುಡುಗಿಯೊಬ್ಬಳು ಕಂಚಿನಡ್ಕ ಪದವಿನ ತನ್ನ ಮನೆಗೆ ಬರಹೇಳಿದ್ದು ಅದರಂತೆ ತೆರಳಿದ್ದ ಯುವಕನಿಗೆ ಸ್ಥಳೀಯ ಯುವಕರು ಸೇರಿ ಕಟ್ಟಿ ಹಾಕಿ ಥಳಿಸಿದ್ದಾರೆ. ಮುಖ, ಕೈಯಲ್ಲಿ ರಕ್ತ ಬರುವಷ್ಟು ಥಳಿಸಿದ್ದು ಆತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಗುಂಪು ಹಲ್ಲೆ ನಡೆಸಿದ ಕಂಚಿನಡ್ಕಪದವು ನಿವಾಸಿಗಳಾದ ಮಹಮ್ಮದ್ ಸಫ್ವಾನ್ (25), ಮಹಮ್ಮದ್ ರಿಜ್ವಾನ್ (25), ಇರ್ಫಾನ್ (27), ಅನೀಸ್ ಅಹ್ಮದ್(19), ನಾಸೀರ್ (27) ಮತ್ತು ಶಾಕೀರ್ (18) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕಲಂ 115(2), 126(2), 189(2), 190, 191(2), 351 (2), 352, 109, 117 (4) ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ.
Youth stripped naked, assulted for visiting girls house at night at bengare in Mangalore, Video viral. Mohammed Mustafa, a resident of Bengare in Mangaluru, was reportedly attacked by a mob who tied him to a pole, stripped him half-naked.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm