ಬ್ರೇಕಿಂಗ್ ನ್ಯೂಸ್
14-11-24 04:32 pm Bangalore Correspondent ಕ್ರೈಂ
ಬೆಂಗಳೂರು, ನ.14: ಯುವ ವೈದ್ಯೆಯೊಬ್ಬರಿಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.
ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ದೂರು ನೀಡಿದ್ದು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿಗೆ 2020ರಲ್ಲಿ ಫೇಸ್ಬುಕ್ ಮೂಲಕ ಪರಿಚಿತಳಾಗಿದ್ದರು. ಆ ವೇಳೆ ಯುವತಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದರೆ, ರಾಜಕುಮಾರ್ ಜೋಡಟ್ಟಿ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಇಬ್ಬರು ಕೂಡ ಪರಸ್ಪರ ಪರಿಚಯವಾಗಿ ಪ್ರೀತಿಸ ತೊಡಗಿದ್ದರು.
ಸ್ನೇಹದಲ್ಲಿದ್ದಾಗ ವೈದ್ಯೆ ಬಳಿಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದ ಎಂಬ ಆರೋಪವೂ ರಾಜಕುಮಾರ್ ಜೋಡಟ್ಟಿ ವಿರುದ್ಧ ಕೇಳಿಬಂದಿದೆ. ಅಲ್ಲದೆ, ಇತ್ತೀಚೆಗೆ ನಗ್ನ ಫೊಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ವೈದ್ಯೆ ಆರೋಪ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ, ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡ್ತಿರುವುದಾಗಿ ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Basavanagudi Police Station Sub inspector Rajukumar alleged of sexual harrasment, demands of nude photos of doctor. A case has been filed to police commissioner of Bangalore and other officials
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm