ಬ್ರೇಕಿಂಗ್ ನ್ಯೂಸ್
14-11-24 04:32 pm Bangalore Correspondent ಕ್ರೈಂ
ಬೆಂಗಳೂರು, ನ.14: ಯುವ ವೈದ್ಯೆಯೊಬ್ಬರಿಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.
ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ದೂರು ನೀಡಿದ್ದು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿಗೆ 2020ರಲ್ಲಿ ಫೇಸ್ಬುಕ್ ಮೂಲಕ ಪರಿಚಿತಳಾಗಿದ್ದರು. ಆ ವೇಳೆ ಯುವತಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದರೆ, ರಾಜಕುಮಾರ್ ಜೋಡಟ್ಟಿ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಇಬ್ಬರು ಕೂಡ ಪರಸ್ಪರ ಪರಿಚಯವಾಗಿ ಪ್ರೀತಿಸ ತೊಡಗಿದ್ದರು.
ಸ್ನೇಹದಲ್ಲಿದ್ದಾಗ ವೈದ್ಯೆ ಬಳಿಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದ ಎಂಬ ಆರೋಪವೂ ರಾಜಕುಮಾರ್ ಜೋಡಟ್ಟಿ ವಿರುದ್ಧ ಕೇಳಿಬಂದಿದೆ. ಅಲ್ಲದೆ, ಇತ್ತೀಚೆಗೆ ನಗ್ನ ಫೊಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ವೈದ್ಯೆ ಆರೋಪ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ, ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡ್ತಿರುವುದಾಗಿ ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Basavanagudi Police Station Sub inspector Rajukumar alleged of sexual harrasment, demands of nude photos of doctor. A case has been filed to police commissioner of Bangalore and other officials
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm