ಬ್ರೇಕಿಂಗ್ ನ್ಯೂಸ್
16-11-24 08:05 pm Bangalore Correspondent ಕ್ರೈಂ
ಬೆಂಗಳೂರು, ನ.16: ಅಪ್ಪಾ.. ಅಪ್ಪ.. ನಂಗೆ ಹೊಸ ಮೊಬೈಲ್ ಕೊಡಿಸಪ್ಪಾ.. ಇಲ್ಲ ಅಂದ್ರೆ ಮನೆಯಲ್ಲಿರುವ ಹಳೆಯ ಮೊಬೈಲ್ ಅನ್ನೇ ರಿಪೇರಿ ಮಾಡ್ಸು ಅಪ್ಪಾ.. ಎಂದು ಕೇಳಿದ 14 ವರ್ಷದ ಮಗನನ್ನ ತಂದೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಶಿನಗರದಲ್ಲಿ ನಿನ್ನೆ ತಡರಾತ್ರಿ ವೇಳೆ ಈ ದುರ್ಘಟನೆ ನಡೆದಿದೆ. ತೇಜಸ್ (14) ತಂದೆಯಿಂದಲೇ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಮಗ. ತಂದೆ ರವಿಕುಮಾರ್ ಆರೋಪಿ ಆಗಿದ್ದಾನೆ.
ಆರೋಪಿ ರವಿ ಕುಮಾರ್ ಬೆಂಗಳೂರಿನಲ್ಲಿ ಕಾರ್ಪೆಂಟರ್ ಕೆಲಸ ಮಾಡುತ್ತಾ ಬಂದ ಹಣದಲ್ಲಿ ಕುಟುಂಬ ನಿರ್ವಹಣೆ ಮಾಡುತ್ತಿದ್ದ. ಆದರೆ, ಅಪ್ಪನಿಗೆ ಪ್ರತಿನಿತ್ಯ ಒಂದೊಂದೇ ಬೇಡಿಕೆ ಇಡುತ್ತಿದ್ದ ಮಗನಿಂದ ಅಪ್ಪನಿಗೆ ಬೇಸರ ಉಂಟಾಗುತ್ತಿತ್ತು. ಆದರೆ, ಇತ್ತೀಚೆಗೆ ಅಪ್ಪಾ.. ನನ್ನ ಎಲ್ಲ ಫ್ರೆಂಡ್ಸ್ ಬಳಿ ಮೊಬೈಲ್ ಇದೆ. ನೀನು ನನಗೆ ಹೊಸ ಫೋನ್ ಕೊಡಿಸು ಎಂದಿದ್ದಾನೆ. ನಿನಗೆ ಹೊಸ ಫೋನ್ ಕೊಡಿಸಲು ಆಗದಿದ್ದರೆ, ಮನೆಯಲ್ಲಿ ಒಂದು ಹಳೆಯ ಫೋನ್ ಇದೆಯಲ್ಲ ಅದನ್ನಾದರೂ ರಿಪೇರಿ ಮಾಡಿಸಿ ಕೊಡು ಎಂದು ಕೇಳಿದ್ದಾನೆ. ಅಪ್ಪ ಇದಕ್ಕೆ ಸೊಪ್ಪು ಹಾಕದಿದ್ದಾಗ, ಮೊಬೈಲ್ ರಿಪೇರಿ ಮಾಡಿಸು ಅಂತ ಮಗ ತೇಜಸ್ ಹಠ ಮಾಡಲು ಆರಂಭಿಸಿದ್ದಾನೆ.
ಕಾರ್ಪೆಂಟರ್ ಕೆಲಸದಿಂದ ತನಗೆ ಬರುವ ಸ್ವಲ್ಪ ಆದಾಯದಿಂದ ಕುಟುಂಬ ನಿರ್ವಹಣೆ ಮಾಡುವುದೇ ಕಷ್ಟವಾಗಿರುವಾಗ ಇನ್ನು ಮಗನ ಇಷ್ಟಗಳನ್ನು ಈಡೇರಿಸಲು ಅಪ್ಪನಿಗೆ ಸುತಾರಾಂ ಇಷ್ಟವಿರಲಿಲ್ಲ. ಹೀಗಾಗಿ, ರವಿಕುಮಾರ್ ಕೆಲಸ ಮುಗಿಸಿ ಮನೆಗೆ ಬರುವಾಗ ಕುಡಿದು ಬಂದು ಮಗನನ್ನು ಬೈಯುತ್ತಿದ್ದ. ನಿನ್ನೆ ರಾತ್ರಿಯೂ ಕೂಡ ಮದ್ಯ ಸೇವಿಸಿ ಬಂದ ರವಿಕುಮಾರ್ ತನ್ನ ಮಗನಿಗೆ ಬೈಯಲು ಆರಂಭಿಸಿದ್ದಾನೆ. ನೀನು ಸರಿಯಾಗಿ ಓದಲ್ಲ, ಶಾಲೆಗೆ ಹೋಗಲ್ಲ, ಕೆಟ್ಟವರ ಸಹವಾಸ ಮಾಡ್ತೀಯಾ ಅಂತಾ ಗಲಾಟೆ ತೆಗೆದಿದ್ದಾರೆ. ಜೊತೆಗೆ, ನೀನು ಕೆಟ್ಟವರ ಸಂಘ ಮಾಡ್ತೀಯಾ, ಮೊಬೈಲ್ ಕೇಳ್ತೀಯಾ ಅಂತ ಮಗನ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ.
ಆದರೆ, ಹೀಗೆ ಮಗನ ಮೇಲೆ ಹಲ್ಲೆ ಮಾಡುವಾಗ ಆತನನ್ನು ಬ್ಯಾಟ್ನಿಂದ ಥಳಿಸಿ ಗೋಡೆಗೆ ತಳ್ಳಿದ್ದಾನೆ. ಆದರೆ, ಅಪ್ರಾಪ್ತ ಮಗ ತೇಜಸ್ ಅಪ್ಪ ದೂಡಿದ ರಭಸಕ್ಕೆ ಗೋಡೆಗೆ ಹೋಗಿ ತಲೆ ಹೊಡೆದುಕೊಂಡು ಅಲ್ಲಿಯೇ ರಕ್ತಸ್ರಾವ ಉಂಟಾಗಿದೆ. ತಲೆಗೆ ಬಲವಾದ ಪೆಟ್ಟು ಬಿದ್ದ ತಕ್ಷಣ ಮನೆಯವರು ಕೂಡಲೇ ಆತನನ್ನು ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮಗ ತೇಜಸ್ ಸಾವಿಗೀಡಾಗಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಮೃತ ಬಾಲಕನ ತಂದೆ ರವಿಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
Bangalore Father kills son over mobile dispute. 14 year old son Tejas has been hacked to death. The arrested father has been identified as Ravi Kumar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm