ಬ್ರೇಕಿಂಗ್ ನ್ಯೂಸ್
17-11-24 09:54 pm Bangalore Correspondent ಕ್ರೈಂ
ಬೆಂಗಳೂರು, ನ 17: ವಿದೇಶಕ್ಕೆ ಮಾದಕದ್ರವ್ಯ ಸಾಗಾಟದ ಪ್ರಕರಣದಲ್ಲಿ ಸಿಲುಕಿರುವಂತೆ ನಂಬಿಸಿ, ಪೊಲೀಸರ ಸೋಗಿನಲ್ಲಿ ಸಹಾಯ ಮಾಡುವುದಾಗಿ ಸಾಫ್ಟ್ವೇರ್ ಉದ್ಯೋಗಿಯೊಬ್ಬರಿಗೆ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಯುವತಿಯೊಬ್ಬರು ನೀಡಿರುವ ದೂರಿನನ್ವಯ ಮುಂಬೈ ಏರ್ ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ 40.18 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ವಂಚಕರ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೆಂಬರ್ 7ರಂದು ಅಪರಿಚಿತ ನಂಬರ್ನಿಂದ ದೂರುದಾರ ಯುವತಿಗೆ ಕರೆ ಮಾಡಿದ್ದ ವಂಚಕನೊಬ್ಬ ತನ್ನನ್ನು ಕೋರಿಯರ್ ಕಂಪನಿಯೊಂದರ ಪ್ರತಿನಿಧಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ "ನಿಮ್ಮ ಹೆಸರಿನಲ್ಲಿ ಮುಂಬೈನಿಂದ ಇರಾನ್ಗೆ ಕಳುಹಿಸಿರುವ ಪಾರ್ಸೆಲ್ನಲ್ಲಿ ಎಂಡಿಎಂಎ ಸೇರಿದಂತೆ ಇತರೆ ಮಾದಕ ಪದಾರ್ಥಗಳಿವೆ. ನಿಮ್ಮ ವೈಯಕ್ತಿಕ ದಾಖಲಾತಿಗಳು ಮತ್ತು ಫೋನ್ ನಂಬರ್ ಕೋರಿಯರ್ಗೆ ಲಿಂಕ್ ಆಗಿದೆ. ಈ ಕುರಿತು ನಿಮಗೆ ಏನಾದರೂ ಗೊತ್ತಾ?" ಎಂದು ಕೇಳಿದ್ದಾನೆ. ದೂರುದಾರ ಯುವತಿ ತನಗೆ ಗೊತ್ತಿಲ್ಲ ಎಂದಾಗ "ಮುಂಬೈ ಏರ್ ಕಸ್ಟಮ್ಸ್ ಕಂಟ್ರೋಲ್ ರೂಂಗೆ ಕರೆ ಕನೆಕ್ಟ್ ಮಾಡುತ್ತೇನೆ" ಎಂದು ಮತ್ತೋರ್ವ ವಂಚಕನಿಗೆ ಕರೆಯನ್ನು ವರ್ಗಾಯಿಸಿದ್ದನು.
ಏರ್ ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ಮಾತನಾಡಿದ ಮತ್ತೋರ್ವ ವಂಚಕ, ದೂರುದಾರಳಿಗೆ ಟೆಲಿಗ್ರಾಂ ಆ್ಯಪ್ ಡೌನ್ಲೋಡ್ ಮಾಡಿಸಿ ವಿಡಿಯೋ ಕರೆ ಮಾಡಿದ್ದಾನೆ. ನಂತರ "ನಾವು 6 ತಿಂಗಳ ಹಿಂದೆ ಬಂಧಿಸಿದ್ದ ಓರ್ವ ಕ್ರಿಮಿನಲ್ ವ್ಯಕ್ತಿ ಸಾರ್ವಜನಿಕರ ದಾಖಲೆಗಳನ್ನು ಪಡೆದು ಕೋರಿಯರ್/ಪಾರ್ಸೆಲ್ ರವಾನೆಗೆ ಬಳಸುತ್ತಿದ್ದ. ನಿಮಗೂ ಸಹ ಹಾಗೆಯೇ ಆಗಿರಬಹುದು. ನಾವು 3 ರೀತಿಯಲ್ಲಿ ತನಿಖೆ ನಡೆಸಿ ನಿಮಗೆ PCC (ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್) ಕೊಡುತ್ತೇವೆ" ಎಂದು ನಂಬಿಸಿದ್ದ. ನಂತರ ದೂರುದಾರಳ ವೈಯಕ್ತಿಕ ದಾಖಲೆಗಳು, ಕುಟುಂಬ ಸದಸ್ಯರ ವಿವರ, ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದುಕೊಂಡು, "ನಿಮ್ಮ ಖಾತೆಯಲ್ಲಿರುವ ಹಣವನ್ನು ನಾವು ಹೇಳಿದ ಖಾತೆಗೆ ವರ್ಗಾಯಿಸಿ, ಆರ್ಬಿಐನಿಂದ ಪರಿಶೀಲನೆ ನಡೆಸಿ ವಾಪಸ್ ನಿಮ್ಮ ಖಾತೆಗೆ ಮರು ವರ್ಗಾವಣೆ ಮಾಡಲಿದ್ದೇವೆ" ಎಂದು ತಿಳಿಸಿದ್ದ.
ಆರೋಪಿಗಳ ಮಾತು ನಿಜವೆಂದು ನಂಬಿದ್ದ ದೂರುದಾರ ಯುವತಿ ತನ್ನ ಮೂರು ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 40.18 ಲಕ್ಷ ರೂ. ಹಣವನ್ನು ಅವರು ಹೇಳಿದ ಖಾತೆಗಳಿಗೆ ವರ್ಗಾಯಿಸಿದ್ದರು. ತನ್ನ ಖಾತೆಗೆ ಹಣ ಮರು ವರ್ಗಾವಣೆಯಾಗದಿದ್ದಾಗ ತಾನು ವಂಚನೆಗೊಳಗಾಗಿರುವುದು ತಿಳಿದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರು ಪಶ್ಚಿಮ ವಿಭಾಗದ ಸಿಇಎನ್ ಪೊಲೀಸರು ತನಿಖೆ ಆರಂಭಿಸಿದ್ದು, ಹಣ ಜಮೆಯಾದ ಖಾತೆಗಳ ವಿವರಗಳನ್ನು ಕಲೆಹಾಕುತ್ತಿರುವುದಾಗಿ ತಿಳಿಸಿದ್ದಾರೆ.
Bangalore software engineer girl cheated of 40 lakhs in the name of fake police by online fraud. A case has been registered at the CEN Police station in Bangalore
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm