ಬ್ರೇಕಿಂಗ್ ನ್ಯೂಸ್
27-11-24 01:11 pm Mangalore Correspondent ಕ್ರೈಂ
ಉಳ್ಳಾಲ, ನ.27: ಕೊಲ್ಯದ ಸಂತ ಜೋಸೆಫರ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಕೋಟೆಕಾರಿನ ಸ್ಟೆಲ್ಲಾ ಮೇರೀಸ್ ಕನ್ನಡ ಮಾಧ್ಯಮ ಶಾಲೆಗಳಿಗೆ ಕಳ್ಳರು ಕನ್ನ ಹಾಕಿದ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾವನ್ನು ತಿರುಚಿ ಬೀಗ ಒಡೆದು ಒಳನುಗ್ಗಿದ ಕಳ್ಳರು ಕಚೇರಿಯನ್ನು ತಡಕಾಡಿದ್ದು, ನಗದು ದೋಚಿ ಪರಾರಿಯಾಗಿದ್ದಾರೆ.
ಕಳ್ಳತನ ಪ್ರಕರಣವು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲ್ಯ ಜಾಯ್ ಲ್ಯಾಂಡ್ ಮತ್ತು ಕೋಟೆಕಾರಿನ ಸ್ಟೆಲ್ಲಾ ಮೇರೀಸ್ ಶಾಲೆಗಳಲ್ಲಿ ಕಳ್ಳತನ ನಡೆದಿದೆ. ಎರಡು ಶಾಲೆಗಳಲ್ಲೂ ಸಿಸಿಟಿವಿ ಅಳವಡಿಸಲಾಗಿದ್ದು ಕಳ್ಳರು ಕ್ಯಾಮೆರಾಗಳನ್ನ ಬೇರೆ ದಿಕ್ಕಿಗೆ ತಿರುಚಿ ಚಾಲಾಕಿತನ ಮೆರೆದಿದ್ದಾರೆ.
ಕೊಲ್ಯ ಜಾಯ್ ಲ್ಯಾಂಡ್ ಶಾಲೆಗೆ ಮೂರನೇ ಬಾರಿ ಕಳ್ಳರು ಕನ್ನ ಹಾಕಿದ್ದಾರೆ. ಈ ಹಿಂದೆಯೂ ಎರಡು ಬಾರಿ ಶಾಲೆಗೆ ಕಳ್ಳರು ನುಗ್ಗಿದ್ದು ನಗದು ಕಳವುಗೈದಿದ್ದರು. ಈ ಸಲ ಸಿಸಿಟಿವಿ ಕ್ಯಾಮೆರಾ ತಿರುಚಿ ಒಳ ನುಗ್ಗಿದ ಕಳ್ಳರು ಪ್ರಾಂಶುಪಾಲರ ಕಚೇರಿ, ಕಬಾಟುಗಳ ಬೀಗ ಒಡೆದು ತಡಕಾಡಿದ್ದು ವಿದ್ಯಾರ್ಥಿಗಳಿಂದ ಪಿಕ್ನಿಕ್ ಗಾಗಿ ಸಂಗ್ರಹಿಸಿದ್ದ ಸುಮಾರು 26,000 ರೂಪಾಯಿ ನಗದನ್ನ ಎಗರಿಸಿ ಪರಾರಿಯಾಗಿದ್ದಾರೆ.




ಕೋಟೆಕಾರಿನ ಸ್ಟೆಲ್ಲಾ ಮೇರಿಸ್ ಶಾಲೆಗೂ ಬುಧವಾರ ಮುಂಜಾನೆ 4.30 ಗಂಟೆ ವೇಳೆಗೆ ಕನ್ನ ಹಾಕಿದ ಕಳ್ಳನೋರ್ವನು ಸಿಸಿಟಿವಿ ಕ್ಯಾಮರಕ್ಕೆ ಮುಖ ಕಾಣದಿರಲು ಮ್ಯಾಟನ್ನು ಅಡ್ಡ ಹಿಡಿದು ಮುನ್ನುಗ್ಗುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿ ದಾಖಲಾಗಿದೆ. ಸಿಸಿಟಿವಿ ಕ್ಯಾಮರಾ ತಿರುಚಿ ಕಚೇರಿ ,ಸ್ಟಾಫ್ ರೂಂನ ಕಪಾಟುಗಳನ್ನ ಒಡೆದು ತಡಕಾಡಿದ ಕಳ್ಳ ಪ್ರಾಂಶುಪಾಲರ ಕೋಣೆಯಲ್ಲಿದ್ದ ಸಿಕ್ಕ 3,000 ರೂಪಾಯಿ ನಗದನ್ನ ಕದ್ದೊಯ್ದಿದ್ದಾನೆ.
ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಎರಡೂ ಶಾಲೆಗಳಲ್ಲೂ ಏಕಕಾಲದಲ್ಲಿ ಕಳ್ಳತನ ನಡೆದಿದ್ದು, ಓರ್ವನೇ ಕಳ್ಳ ಕೈಚಳಕ ತೋರಿದ್ದಾನೋ ಅಥವ ತಂಡ ಶಾಮೀಲಾಗಿದೆಯೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮರ್ಪಕ ಬೀಟ್ ಪೊಲೀಸಿಂಗ್ ನಡೆಯದೆ ಇರೋದರಿಂದ ಕಳ್ಳತನ ಪ್ರಕರಣಗಳು ಜಾಸ್ತಿಯಾಗುತ್ತಿದೆಯೆಂಬ ಆರೋಪಗಳು ಕೇಳಿಬಂದಿವೆ.
The Mangalore Kolya Joy Land School was robbed, with cash stolen. This is the third time a robbery has occurred at the same school. The police are now investigating the case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm