ಬ್ರೇಕಿಂಗ್ ನ್ಯೂಸ್
14-12-20 12:00 pm Mangalore Correspondent ಕ್ರೈಂ
ಸುಳ್ಯ, ಡಿ.14: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೊನೆಗೂ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಷ್ಠಿತ ಶಾಲೆಯ ಆಡಳಿತಾಧಿಕಾರಿ ಆಗಿರುವ ದೇವಚಳ್ಳ ಗ್ರಾಮದ ಅನಿಲ್ ಅಂಬೆಕಲ್ಲು ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಡಿ.10ರಂದು ಮಧ್ಯಾಹ್ನ ಮೂರು ಗಂಟೆಗೆ ಘಟನೆ ನಡೆದಿದೆ. ಆರೋಪಿ ಬಾಲಕಿಯ ತಂದೆಯ ಪರಿಚಿತನಾಗಿದ್ದು ಶಾಲೆಯ ಬಳಿ ಬಂದಿದ್ದ ಬಾಲಕಿಗೆ ಸೈಕಲ್ ತೆಗೆಸಿಕೊಡುತ್ತೇನೆಂದು ಹೇಳಿ ಕೊಠಡಿಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದಾನೆ. ಬಾಲಕಿ ಬಳಿಕ ಮನೆಗೆ ಹಿಂತಿರುಗಿದಾಗ, ದೈಹಕವಾಗಿ ಬಳಲಿದಂತೆ ಕಂಡುಬಂದಿದ್ದು ತಾಯಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು.
ಮನೆಯವರು ಈ ಬಗ್ಗೆ ಶಾಲಾಡಳಿತ ಮಂಡಳಿಗೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡದಂತೆ ಮನವೊಲಿಸಿದ್ದರು ಎನ್ನಲಾಗಿದ್ದು ದೂರು ದಾಖಲಾಗಿರಲಿಲ್ಲ. ಆಡಳಿತಾಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ನಡುವೆ, ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಕೃತ್ಯದ ಬಗ್ಗೆ ಹೆಡ್ ಲೈನ್ ಕರ್ನಾಟಕ ಆರೋಪಿ ಹೆಸರು ಹಾಕದೆ ಘಟನೆ ಬಗ್ಗೆ ಸಾರ್ವಜನಿಕರ ಗಮನಸೆಳೆಯುವ ಸುದ್ದಿ ಮಾಡಿತ್ತು.
ಈ ನಡುವೆ, ಸುಳ್ಯ ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು. ಚೈಲ್ಡ್ ಲೈನ್ ಸಂಸ್ಥೆಯವರು ಮನೆಗೆ ಬಂದು ಬಾಲಕಿಯ ತಪಾಸಣೆ ನಡೆಸಿ ವರದಿ ನೀಡಿದ್ದಾರೆ. ಅಲ್ಲದೆ, ಬಾಲಕಿ ತಾಯಿ ಬಳಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲು ಸೂಚಿಸಿದ್ದಾರೆ. ಅದರಂತೆ, ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Police have field a POCSO act against a private school administrator of sullia for sexually harassing a eight-year-old girl in the school.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm