ಬ್ರೇಕಿಂಗ್ ನ್ಯೂಸ್
14-12-20 12:00 pm Mangalore Correspondent ಕ್ರೈಂ
ಸುಳ್ಯ, ಡಿ.14: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೊನೆಗೂ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಷ್ಠಿತ ಶಾಲೆಯ ಆಡಳಿತಾಧಿಕಾರಿ ಆಗಿರುವ ದೇವಚಳ್ಳ ಗ್ರಾಮದ ಅನಿಲ್ ಅಂಬೆಕಲ್ಲು ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಡಿ.10ರಂದು ಮಧ್ಯಾಹ್ನ ಮೂರು ಗಂಟೆಗೆ ಘಟನೆ ನಡೆದಿದೆ. ಆರೋಪಿ ಬಾಲಕಿಯ ತಂದೆಯ ಪರಿಚಿತನಾಗಿದ್ದು ಶಾಲೆಯ ಬಳಿ ಬಂದಿದ್ದ ಬಾಲಕಿಗೆ ಸೈಕಲ್ ತೆಗೆಸಿಕೊಡುತ್ತೇನೆಂದು ಹೇಳಿ ಕೊಠಡಿಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದಾನೆ. ಬಾಲಕಿ ಬಳಿಕ ಮನೆಗೆ ಹಿಂತಿರುಗಿದಾಗ, ದೈಹಕವಾಗಿ ಬಳಲಿದಂತೆ ಕಂಡುಬಂದಿದ್ದು ತಾಯಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು.
ಮನೆಯವರು ಈ ಬಗ್ಗೆ ಶಾಲಾಡಳಿತ ಮಂಡಳಿಗೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡದಂತೆ ಮನವೊಲಿಸಿದ್ದರು ಎನ್ನಲಾಗಿದ್ದು ದೂರು ದಾಖಲಾಗಿರಲಿಲ್ಲ. ಆಡಳಿತಾಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ನಡುವೆ, ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಕೃತ್ಯದ ಬಗ್ಗೆ ಹೆಡ್ ಲೈನ್ ಕರ್ನಾಟಕ ಆರೋಪಿ ಹೆಸರು ಹಾಕದೆ ಘಟನೆ ಬಗ್ಗೆ ಸಾರ್ವಜನಿಕರ ಗಮನಸೆಳೆಯುವ ಸುದ್ದಿ ಮಾಡಿತ್ತು.
ಈ ನಡುವೆ, ಸುಳ್ಯ ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು. ಚೈಲ್ಡ್ ಲೈನ್ ಸಂಸ್ಥೆಯವರು ಮನೆಗೆ ಬಂದು ಬಾಲಕಿಯ ತಪಾಸಣೆ ನಡೆಸಿ ವರದಿ ನೀಡಿದ್ದಾರೆ. ಅಲ್ಲದೆ, ಬಾಲಕಿ ತಾಯಿ ಬಳಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲು ಸೂಚಿಸಿದ್ದಾರೆ. ಅದರಂತೆ, ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Police have field a POCSO act against a private school administrator of sullia for sexually harassing a eight-year-old girl in the school.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm