ಬ್ರೇಕಿಂಗ್ ನ್ಯೂಸ್
29-11-24 12:20 pm Mangalore Correspondent ಕ್ರೈಂ
ಬೆಳ್ತಂಗಡಿ, ನ.29: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್ ನಲ್ಲಿದ್ದ ನಗದು ಸಹಿತ ಸುಮಾರು 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ನ.24ರಂದು ನಡೆದಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕಾಪು ಕೋಟೆ ಗ್ರಾಮದ ಜೋಗಿ ಕಂಪೌಂಡ್ ನಿವಾಸಿ ಗಾಯತ್ರಿ ಆರ್. ಜೋಗಿ ಅವರಿಗೆ ಸೇರಿದ ಬ್ಯಾಗ್ ನಲ್ಲಿದ್ದ 10 ಸಾವಿರ ರೂ. ನಗದು ಹಾಗೂ 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿದ್ದಾರೆ.
ಗಾಯತ್ರಿ ಅವರು ತನ್ನ ಮಗಳು ರಜಿತಾ, ಆಕೆಯ 7 ತಿಂಗಳ ಮಗು ಹಾಗೂ ತಾಯಿ ತಾರಾ ಜೋಗಿ ಜೊತೆ ನ.24ರಂದು ಬೆಳಗ್ಗೆ 10 ಗಂಟೆಗೆ ಮನೆಯಿಂದ ಕಾರಿನಲ್ಲಿ ಧರ್ಮಸ್ಥಳಕ್ಕೆ ಬಂದಿದ್ದರು. ಬರುವಾಗ ತಮ್ಮ ಬ್ಯಾಗ್ ನಲ್ಲಿ ಮಗಳ ಹಾಗೂ ಮಗುವಿನ ಹಾಗೂ ತನಗೆ ಸೇರಿದ 40 ಪವನ್ ಚಿನ್ನಾಭರಣಗಳನ್ನು ಎರಡು ಪರ್ಸ್ ನಲ್ಲಿ ಇಟ್ಟು 10 ಸಾವಿರ ನಗದನ್ನು ಇನ್ನೊಂದು ಬ್ಯಾಗ್ ನಲ್ಲಿಟ್ಟು ಬಂದಿದ್ದರು. ಮಧ್ಯಾಹ್ನ 1.45ರ ಸುಮಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಕಾರನ್ನು ವಾಹನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಬಳಿಕ ದೇವರ ದರ್ಶನಕ್ಕೆ ದೇವಸ್ಥಾನದ ಒಳಗಡೆ ಹೋಗಿ ದೇವರ ದರ್ಶನ ಮುಗಿಸಿ ಮಧ್ಯಾಹ್ನ 2.30 ಗಂಟೆಯ ಸಮಯಕ್ಕೆ ಬ್ಯಾಗನ್ನು ನೋಡಿದಾಗ, ಜಿಪ್ ತೆರೆದುಕೊಂಡಿರುವುದು ಕಂಡುಬಂದಿತ್ತು.
ಬ್ಯಾಗ್ ನಲ್ಲಿಟ್ಟಿದ್ದ ಸುಮಾರು 40 ಪವನ್ ಚಿನ್ನಾಭರಣಗಳನ್ನು ಇರಿಸಿದ್ದ ಎರಡು ಪರ್ಸ್ ಹಾಗೂ ನಗದು ನಾಪತ್ತೆಯಾಗಿತ್ತು. ಕೂಡಲೇ ಪಾರ್ಕ್ ಮಾಡಿದ್ದ ಕಾರಿನತ್ತ ತೆರಳಿ ಹುಡುಕಾಡಿದಾಗ ಅಲ್ಲಿಯೂ ಚಿನ್ನಾಭರಣ ಪತ್ತೆಯಾಗಿರಲಿಲ್ಲ. ದೇವರ ದರ್ಶನ ಸಂದರ್ಭದಲ್ಲಿಯೇ ಬ್ಯಾಗಿನಲ್ಲಿದ್ದ ಚಿನ್ನಾಭರಣವನ್ನು ಯಾರೋ ಕಳವುಗೈದಿರಬೇಕೆಂದು ಗಾಯತ್ರಿ ಜೋಗಿ ಅವರು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದಾರೆ.
Family from Udupi lost 40 pound gold after robbers steal stolen gold during visit to Dharmasthala in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm