ಬ್ರೇಕಿಂಗ್ ನ್ಯೂಸ್
29-11-24 12:20 pm Mangalore Correspondent ಕ್ರೈಂ
ಬೆಳ್ತಂಗಡಿ, ನ.29: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್ ನಲ್ಲಿದ್ದ ನಗದು ಸಹಿತ ಸುಮಾರು 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ನ.24ರಂದು ನಡೆದಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕಾಪು ಕೋಟೆ ಗ್ರಾಮದ ಜೋಗಿ ಕಂಪೌಂಡ್ ನಿವಾಸಿ ಗಾಯತ್ರಿ ಆರ್. ಜೋಗಿ ಅವರಿಗೆ ಸೇರಿದ ಬ್ಯಾಗ್ ನಲ್ಲಿದ್ದ 10 ಸಾವಿರ ರೂ. ನಗದು ಹಾಗೂ 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿದ್ದಾರೆ.
ಗಾಯತ್ರಿ ಅವರು ತನ್ನ ಮಗಳು ರಜಿತಾ, ಆಕೆಯ 7 ತಿಂಗಳ ಮಗು ಹಾಗೂ ತಾಯಿ ತಾರಾ ಜೋಗಿ ಜೊತೆ ನ.24ರಂದು ಬೆಳಗ್ಗೆ 10 ಗಂಟೆಗೆ ಮನೆಯಿಂದ ಕಾರಿನಲ್ಲಿ ಧರ್ಮಸ್ಥಳಕ್ಕೆ ಬಂದಿದ್ದರು. ಬರುವಾಗ ತಮ್ಮ ಬ್ಯಾಗ್ ನಲ್ಲಿ ಮಗಳ ಹಾಗೂ ಮಗುವಿನ ಹಾಗೂ ತನಗೆ ಸೇರಿದ 40 ಪವನ್ ಚಿನ್ನಾಭರಣಗಳನ್ನು ಎರಡು ಪರ್ಸ್ ನಲ್ಲಿ ಇಟ್ಟು 10 ಸಾವಿರ ನಗದನ್ನು ಇನ್ನೊಂದು ಬ್ಯಾಗ್ ನಲ್ಲಿಟ್ಟು ಬಂದಿದ್ದರು. ಮಧ್ಯಾಹ್ನ 1.45ರ ಸುಮಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಕಾರನ್ನು ವಾಹನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಬಳಿಕ ದೇವರ ದರ್ಶನಕ್ಕೆ ದೇವಸ್ಥಾನದ ಒಳಗಡೆ ಹೋಗಿ ದೇವರ ದರ್ಶನ ಮುಗಿಸಿ ಮಧ್ಯಾಹ್ನ 2.30 ಗಂಟೆಯ ಸಮಯಕ್ಕೆ ಬ್ಯಾಗನ್ನು ನೋಡಿದಾಗ, ಜಿಪ್ ತೆರೆದುಕೊಂಡಿರುವುದು ಕಂಡುಬಂದಿತ್ತು.
ಬ್ಯಾಗ್ ನಲ್ಲಿಟ್ಟಿದ್ದ ಸುಮಾರು 40 ಪವನ್ ಚಿನ್ನಾಭರಣಗಳನ್ನು ಇರಿಸಿದ್ದ ಎರಡು ಪರ್ಸ್ ಹಾಗೂ ನಗದು ನಾಪತ್ತೆಯಾಗಿತ್ತು. ಕೂಡಲೇ ಪಾರ್ಕ್ ಮಾಡಿದ್ದ ಕಾರಿನತ್ತ ತೆರಳಿ ಹುಡುಕಾಡಿದಾಗ ಅಲ್ಲಿಯೂ ಚಿನ್ನಾಭರಣ ಪತ್ತೆಯಾಗಿರಲಿಲ್ಲ. ದೇವರ ದರ್ಶನ ಸಂದರ್ಭದಲ್ಲಿಯೇ ಬ್ಯಾಗಿನಲ್ಲಿದ್ದ ಚಿನ್ನಾಭರಣವನ್ನು ಯಾರೋ ಕಳವುಗೈದಿರಬೇಕೆಂದು ಗಾಯತ್ರಿ ಜೋಗಿ ಅವರು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದಾರೆ.
Family from Udupi lost 40 pound gold after robbers steal stolen gold during visit to Dharmasthala in Mangalore.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am