ಬ್ರೇಕಿಂಗ್ ನ್ಯೂಸ್
14-12-20 01:19 pm Headline Karnataka News Network ಕ್ರೈಂ
ಲಕ್ನೋ, ಡಿ.14: 55 ವರ್ಷದ ಮಧ್ಯವಯಸ್ಕ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಸೊಸೆ ಸೇರಿ ಕಡಿದು ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ಭಾದೋಹಿ ಜಿಲ್ಲೆಯಲ್ಲಿ ನಡೆದಿದೆ.
ಭಾದೋಹಿ ಜಿಲ್ಲೆಯ ಕೊಯಿರಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. 55 ವರ್ಷದ ವ್ಯಕ್ತಿ ತನ್ನ ಕಿರಿಯ ಸೊಸೆಯ ಜೊತೆ ಸಂಬಂಧ ಇರಿಸಿಕೊಂಡಿದ್ದರು. ಸೊಸೆಯನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಮತ್ತು ಹಿರಿಯ ಸೊಸೆ ವಿರೋಧ ವ್ಯಕ್ತಪಡಿಸುತ್ತಿದ್ದರು. ಇದೇ ವಿಚಾರದಲ್ಲಿ ಕೆಲವು ಸಮಯದಿಂದ ಇವರ ನಡುವೆ ಜಗಳ ನಡೆಯುತ್ತಿತ್ತು. ಬಳಿಕ ಕಿರಿಯ ಸೊಸೆಯನ್ನು ಅತ್ತೆ ತವರು ಮನೆಗೆ ಕಳಿಸಿದ್ದಳು. ಇದರಿಂದ ಕ್ರುದ್ಧನಾದ ವ್ಯಕ್ತಿ ಹಿರಿಯ ಸೊಸೆ ಮತ್ತು ಪತ್ನಿಗೆ ಹಲ್ಲೆಗೈದು ಮನೆಯಿಂದ ಹೊರಗೆ ಹಾಕಿದ್ದ. ಅತ್ತೆ ಸೊಸೆ ಬಳಿಕ ಅಲ್ಲಿಯೇ ನೂರು ಮೀಟರ್ ದೂರದಲ್ಲಿ ಬೇರೆ ಮನೆ ಮಾಡಿಕೊಂಡಿದ್ದರು.
ಐದು ದಿನಗಳ ಹಿಂದೆ ವ್ಯಕ್ತಿ, ತನ್ನ ಕಿರಿಯ ಸೊಸೆಯನ್ನು ಮನೆಗೆ ಕರೆದುಕೊಂಡು ಬಂದಿದ್ದು ತನ್ನ ಜೊತೆಗೇ ಬಾಳುವಂತೆ ಹೇಳಿಕೊಂಡಿದ್ದ. ಈ ನಡುವೆ, ಆತನ ಪತ್ನಿ ಮತ್ತು ಹಿರಿಯ ಸೊಸೆ ಶನಿವಾರ ರಾತ್ರಿ ಮನೆಗೆ ದಾಳಿ ನಡೆಸಿದ್ದು, ಮೆಟ್ಟು ಗತ್ತಿಯಿಂದ ವ್ಯಕ್ತಿಯ ಕುತ್ತಿಗೆ ಕಡಿದು ಹಲ್ಲೆ ಮಾಡಿದ್ದಾರೆ. ತೀವ್ರ ಗಾಯಗೊಂಡು ವ್ಯಕ್ತಿ ಸಾವು ಕಂಡಿದ್ದಾನೆ. ಈ ಬಗ್ಗೆ ಕಿರಿಯ ಸೊಸೆ ಪೊಲೀಸರಿಗೆ ದೂರು ನೀಡಿದ್ದು, ತನ್ನ ಅತ್ತೆ ಮತ್ತು ಆಕೆಯ ಸೊಸೆ ಸೇರಿ ನನಗೆ ಮತ್ತು ನನ್ನ ಮಾವನಿಗೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಪೊಲೀಸರು ಮನೆಗೆ ಬಂದಾಗ, ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಆಸ್ಪತ್ರೆಗೆ ಒಯ್ದಾಗ ಆತ ಮೃತಪಟ್ಟಿದ್ದ. ಪ್ರಾಥಮಿಕ ಮಾಹಿತಿ ಪ್ರಕಾರ, ವ್ಯಕ್ತಿ ಮತ್ತು ಕಿರಿಯ ಸೊಸೆ ನಡುವೆ ಸಂಬಂಧ ಇತ್ತು. ಇದೇ ವಿಚಾರದಲ್ಲಿ ಗಲಾಟೆ ನಡೆದು ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಗೆ ನಾಲ್ವರು ಗಂಡು ಮಕ್ಕಳಿದ್ದು, ಮುಂಬೈನಲ್ಲಿ ವಲಸೆ ಕಾರ್ಮಿಕರಾಗಿದ್ದಾರೆ. ಈ ಪೈಕಿ ಇಬ್ಬರಿಗೆ ಮದುವೆಯಾಗಿದ್ದು , ಪತ್ನಿಯರನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದಾರೆ.
A 55-year-old man was allegedly killed by his wife and elder daughter-in-law in a village in Bhadohi district of Uttar Pradesh for having an illicit relation with his younger daughter-in-law, police said on Sunday.
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
20-09-24 07:39 pm
HK News Desk
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
20-09-24 11:08 pm
Mangalore Correspondent
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
Mangalore, Union Bank of India: ಅಂಬೇಡ್ಕರ್ ವೃತ...
20-09-24 06:56 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am