ಬ್ರೇಕಿಂಗ್ ನ್ಯೂಸ್
14-12-20 01:19 pm Headline Karnataka News Network ಕ್ರೈಂ
ಲಕ್ನೋ, ಡಿ.14: 55 ವರ್ಷದ ಮಧ್ಯವಯಸ್ಕ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಸೊಸೆ ಸೇರಿ ಕಡಿದು ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ಭಾದೋಹಿ ಜಿಲ್ಲೆಯಲ್ಲಿ ನಡೆದಿದೆ.
ಭಾದೋಹಿ ಜಿಲ್ಲೆಯ ಕೊಯಿರಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. 55 ವರ್ಷದ ವ್ಯಕ್ತಿ ತನ್ನ ಕಿರಿಯ ಸೊಸೆಯ ಜೊತೆ ಸಂಬಂಧ ಇರಿಸಿಕೊಂಡಿದ್ದರು. ಸೊಸೆಯನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಮತ್ತು ಹಿರಿಯ ಸೊಸೆ ವಿರೋಧ ವ್ಯಕ್ತಪಡಿಸುತ್ತಿದ್ದರು. ಇದೇ ವಿಚಾರದಲ್ಲಿ ಕೆಲವು ಸಮಯದಿಂದ ಇವರ ನಡುವೆ ಜಗಳ ನಡೆಯುತ್ತಿತ್ತು. ಬಳಿಕ ಕಿರಿಯ ಸೊಸೆಯನ್ನು ಅತ್ತೆ ತವರು ಮನೆಗೆ ಕಳಿಸಿದ್ದಳು. ಇದರಿಂದ ಕ್ರುದ್ಧನಾದ ವ್ಯಕ್ತಿ ಹಿರಿಯ ಸೊಸೆ ಮತ್ತು ಪತ್ನಿಗೆ ಹಲ್ಲೆಗೈದು ಮನೆಯಿಂದ ಹೊರಗೆ ಹಾಕಿದ್ದ. ಅತ್ತೆ ಸೊಸೆ ಬಳಿಕ ಅಲ್ಲಿಯೇ ನೂರು ಮೀಟರ್ ದೂರದಲ್ಲಿ ಬೇರೆ ಮನೆ ಮಾಡಿಕೊಂಡಿದ್ದರು.
ಐದು ದಿನಗಳ ಹಿಂದೆ ವ್ಯಕ್ತಿ, ತನ್ನ ಕಿರಿಯ ಸೊಸೆಯನ್ನು ಮನೆಗೆ ಕರೆದುಕೊಂಡು ಬಂದಿದ್ದು ತನ್ನ ಜೊತೆಗೇ ಬಾಳುವಂತೆ ಹೇಳಿಕೊಂಡಿದ್ದ. ಈ ನಡುವೆ, ಆತನ ಪತ್ನಿ ಮತ್ತು ಹಿರಿಯ ಸೊಸೆ ಶನಿವಾರ ರಾತ್ರಿ ಮನೆಗೆ ದಾಳಿ ನಡೆಸಿದ್ದು, ಮೆಟ್ಟು ಗತ್ತಿಯಿಂದ ವ್ಯಕ್ತಿಯ ಕುತ್ತಿಗೆ ಕಡಿದು ಹಲ್ಲೆ ಮಾಡಿದ್ದಾರೆ. ತೀವ್ರ ಗಾಯಗೊಂಡು ವ್ಯಕ್ತಿ ಸಾವು ಕಂಡಿದ್ದಾನೆ. ಈ ಬಗ್ಗೆ ಕಿರಿಯ ಸೊಸೆ ಪೊಲೀಸರಿಗೆ ದೂರು ನೀಡಿದ್ದು, ತನ್ನ ಅತ್ತೆ ಮತ್ತು ಆಕೆಯ ಸೊಸೆ ಸೇರಿ ನನಗೆ ಮತ್ತು ನನ್ನ ಮಾವನಿಗೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಪೊಲೀಸರು ಮನೆಗೆ ಬಂದಾಗ, ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಆಸ್ಪತ್ರೆಗೆ ಒಯ್ದಾಗ ಆತ ಮೃತಪಟ್ಟಿದ್ದ. ಪ್ರಾಥಮಿಕ ಮಾಹಿತಿ ಪ್ರಕಾರ, ವ್ಯಕ್ತಿ ಮತ್ತು ಕಿರಿಯ ಸೊಸೆ ನಡುವೆ ಸಂಬಂಧ ಇತ್ತು. ಇದೇ ವಿಚಾರದಲ್ಲಿ ಗಲಾಟೆ ನಡೆದು ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಗೆ ನಾಲ್ವರು ಗಂಡು ಮಕ್ಕಳಿದ್ದು, ಮುಂಬೈನಲ್ಲಿ ವಲಸೆ ಕಾರ್ಮಿಕರಾಗಿದ್ದಾರೆ. ಈ ಪೈಕಿ ಇಬ್ಬರಿಗೆ ಮದುವೆಯಾಗಿದ್ದು , ಪತ್ನಿಯರನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದಾರೆ.
A 55-year-old man was allegedly killed by his wife and elder daughter-in-law in a village in Bhadohi district of Uttar Pradesh for having an illicit relation with his younger daughter-in-law, police said on Sunday.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm