ಬ್ರೇಕಿಂಗ್ ನ್ಯೂಸ್
03-12-24 08:50 pm Bangalore Correspondent ಕ್ರೈಂ
ಬೆಂಗಳೂರು, ಡಿ 03: ನಕಲಿ ಮಾರಾಟಗಾರರು ಹಾಗು ನಕಲಿ ಗ್ರಾಹಕರನ್ನು ಸೃಷ್ಟಿಸಿ ಆನ್ಲೈನ್ ಇ-ಕಾಮರ್ಸ್ ವೇದಿಕೆ ಮೀಶೋ ಕಂಪನಿಗೆ ವಂಚಿಸಿದ್ದ ಗುಜರಾತ್ ರಾಜ್ಯದ ಮೂವರು ಆರೋಪಿಗಳನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಉತ್ತಮ್ ಕುಮಾರ್, ಪಾರ್ಥ್ ಭಾಯ್ ಹಾಗೂ ಮೌಲಿಕ್ ಬಂಧಿತರು.
ಕಳೆದ ಏಳು ತಿಂಗಳ ಅವಧಿಯಲ್ಲಿ ಒಟ್ಟು 5.50 ಕೋಟಿ ರೂ ವಂಚನೆಯಾಗಿರುವ ಕುರಿತು ಕಂಪನಿಯ ನೋಡಲ್ ಅಧಿಕಾರಿ ನೀಡಿದ್ದ ದೂರಿನನ್ವಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೀಶೋ ಆ್ಯಪ್ನ ಮೂಲಕ ಗ್ರಾಹಕರು ವಿವಿಧ ವಸ್ತುಗಳನ್ನು ಖರೀದಿಸಬಹುದು. ಈ ರೀತಿ ಖರೀದಿಸಿದ ವಸ್ತುಗಳಿಗೆ ಗ್ರಾಹಕರು ಆನ್ಲೈನ್ ಅಥವಾ ನಗದು ಮೂಲಕ ಪಾವತಿಸಬಹುದು. ಸೂರತ್ನಲ್ಲಿ ಓಂ ಸಾಯಿ ಫ್ಯಾಷನ್ ಎಂಬ ಹೆಸರಿನಲ್ಲಿ ನಕಲಿ ಕಂಪನಿ ತೆರೆದಿದ್ದ ಆರೋಪಿಗಳು, ಅದನ್ನು ಮಾರಾಟಗಾರ ಕಂಪನಿಯೆಂದು ಮೀಶೋದಲ್ಲಿ ರಿಜಿಸ್ಟರ್ ಮಾಡಿಸಿದ್ದರು. ನಂತರ ಮೀಶೋ ಆ್ಯಪ್ ಬಳಸಿ ತಾವೇ ಗ್ರಾಹಕರ ಸೋಗಿನಲ್ಲಿ ನಕಲಿ ಹೆಸರು ಮತ್ತು ವಿಳಾಸ ನೀಡಿ ಪ್ರತೀ ದಿನ ಸರಾಸರಿ 2000ರಿಂದ 2500 ವಿವಿಧ ಉತ್ಪನ್ನಗಳನ್ನು ಬುಕ್ ಮಾಡುತ್ತಿದ್ದರು.
ಆ ರೀತಿ ತಪ್ಪಾಗಿ ನೀಡಿದ ಗ್ರಾಹಕರ ವಿಳಾಸದಿಂದ ಉತ್ಪನ್ನಗಳು ವಾಪಸ್ ಮಾರಾಟಗಾರ ಕಂಪನಿಯಾಗಿರುವ ಓಂ ಸಾಯಿ ಫ್ಯಾಷನ್ಗೆ ಹಿಂತಿರುಗುತ್ತಿದ್ದವು. ಹಾಗೆ ಹಿಂತಿರುಗಿದ ಉತ್ಪನ್ನವಿರುವ ಪಾರ್ಸಲ್ನಲ್ಲಿರುವ ವಸ್ತುವನ್ನು ಬದಲಾಯಿಸುತ್ತಿದ್ದ ಆರೋಪಿಗಳು, 'ಪಾರ್ಸಲ್ನಲ್ಲಿದ್ದ ವಸ್ತು ಬದಲಾಗಿದೆ' ಎಂದು ವೀಡಿಯೋ ಮಾಡಿ ಆ ವೀಡಿಯೊವನ್ನು ಮೀಶೋ ಕಂಪನಿಯವರಿಗೆ ಕಳಿಸುತ್ತಿದ್ದರು. ಉತ್ಪನ್ನಗಳ ಮೌಲ್ಯದಷ್ಟು ಹಣವನ್ನು ಮೀಶೋ ಕಂಪನಿಯಿಂದ ಪಡೆದುಕೊಳ್ಳುತ್ತಿದ್ದರು.
ಪ್ರಕರಣದ ತನಿಖೆ ಕೈಗೊಂಡ ಸೈಬರ್ ಕ್ರೈಂ ಪೊಲೀಸರು ಮೀಶೋ ಕಂಪನಿಯಿಂದ ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಯ ವಿವರ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಹಲವು ಮೊಬೈಲ್ ಫೋನ್ ನಂಬರ್ಗಳ ಮಾಹಿತಿ ಸಂಗ್ರಹಿಸಿ ಗುಜರಾತ್ಗೆ ತೆರಳಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದೇ ರೀತಿ ಒಟ್ಟು 5.50 ಕೋಟಿ ರೂ.ಗಳನ್ನು ಇದುವರೆಗೂ ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗೆ ಜಮಾ ಮಾಡಿಸಿಕೊಂಡಿದ್ದರು. 2023ರಲ್ಲಿ ವೈಟ್ ಫೀಲ್ಡ್ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿಯೂ ಸಹ ಇದೇ ಆರೋಪಿಗಳು ಭಾಗಿಯಾಗಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
In a major cybercrime bust, Bengaluru police have arrested three individuals from Gujarat for allegedly defrauding Meesho, an online marketplace, of Rs 5.5 crore over seven months. The fraudsters, operating under the name "Om Sai Passion" in Surat, conspired to exploit Meesho's platform using fake customer profiles and false claims.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm