ಬ್ರೇಕಿಂಗ್ ನ್ಯೂಸ್
06-12-24 02:26 pm Mangalore Correspondent ಕ್ರೈಂ
ಮಂಗಳೂರು, ಡಿ.6: ಸಹಾಯ ಮಾಡುವ ನೆಪದಲ್ಲಿ ಮನೆಗೆ ಬಂದಿದ್ದ ಯುವಕನೊಬ್ಬ ಜ್ಯೂಸ್ನಲ್ಲಿ ಅಮಲಿನ ಔಷಧಿ ಬೆರೆಸಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾಗಿ ಯುವತಿಯೊಬ್ಬಳು ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಜುಲೈ 21ರಂದು ಸಂತ್ರಸ್ತ ಯುವತಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕದ್ರಿ ರಸ್ತೆಯ ಬಳಿ ಕಾರು ಕೆಟ್ಟು ಹೋಗಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ಬಂದಿದ್ದ ಬೈಕ್ ಸವಾರ ಮೊಹಮ್ಮದ್ ಶಫಿನ್ ಎಂಬಾತ ಕಾರನ್ನು ಸರಿಪಡಿಸಿ, ಬಳಿಕ ಆಕೆಯನ್ನು ಅದೇ ಕಾರಿನಲ್ಲಿ ಕೊಡಿಯಾಲ ಬೈಲಿನ ಅಪಾರ್ಟ್ಮೆಂಟ್ ಒಂದಕ್ಕೆ ಬಿಟ್ಟು ಬಂದಿದ್ದ. ಈ ವೇಳೆ ಆಕೆಯ ಮೊಬೈಲ್ ನಂಬರ್ ಪಡೆದಿದ್ದು ಸಂಪರ್ಕದಲ್ಲಿದ್ದ. ಆ.8ರಂದು ಯುವತಿಯ ಮನೆ ಫ್ರಿಡ್ಜ್ ಕೆಟ್ಟು ಹೋಗಿದ್ದು, ಮನೆಯಲ್ಲಿ ಒಬ್ಬಳೇ ವಾಸವಿದ್ದುದರಿಂದ ಯುವತಿ ಸಹಾಯಕ್ಕಾಗಿ ಶಫಿನ್ಗೆ ಕರೆ ಮಾಡಿದ್ದಾಳೆ. ಆತ ತನ್ನ ಪರಿಚಿತ ರಿಪೇರಿಯವನನ್ನು ಯುವತಿಯ ಮನೆಗೆ ಕರೆದೊಯ್ದು ರಿಪೇರಿ ಮಾಡಿಸಿ ಬಳಿಕ ಮೆಕ್ಯಾನಿಕನ್ನು ಬಿಟ್ಟು ಬರುತ್ತೇನೆ ಎಂದು ಹೇಳಿದ್ದ. ಅಲ್ಲಿ ವರೆಗೆ ಫ್ರಿಡ್ಜ್ ಆನ್ ಮಾಡಬೇಡಿ ಎಂದು ಸೂಚಿಸಿದ್ದ. ಕೆಲವು ಹೊತ್ತಿನ ಬಳಿಕ ಶಫಿನ್ ವಾಪಸು ಬಂದಿದ್ದು, ಈ ವೇಳೆ ಹಣ್ಣು ಹಾಗೂ ಜ್ಯೂಸ್ ತಂದಿದ್ದ. ಜ್ಯೂಸ್ ಕುಡಿದ ಯುವತಿ ನಿದ್ದೆಗೆ ಜಾರಿದ್ದಳು. ಎಚ್ಚರಗೊಂಡಾಗ ಅನುಮಾನದಲ್ಲಿ ವಿಚಾರಿಸಿದಾಗ ದೈಹಿಕ ಸಂಪರ್ಕ ನಡೆಸಿರುವುದಾಗಿ ತಿಳಿಸಿದ್ದ. ಜತೆಗೆ ಮುಂದೆಯೂ ಸಹಕರಿಸಬೇಕು. ಇಲ್ಲದಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಮಾಡಿರುವ ವೀಡಿಯೋವನ್ನು ಹಾಕುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮತ್ತು ಜತೆಗೆ ತನ್ನ ಕಾರನ್ನು ಕೂಡ ಆತ ಕೊಂಡೊಯ್ದಿದ್ದ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.
ಈ ನಡುವೆ ಯುವತಿ ಮನೆಯವರು ಕಾರನ್ನು ಕೇಳಿದ್ದು ಆತನಿಂದ ಕಾರನ್ನು ಪಡೆದುಕೊಳ್ಳಲು ಯುವತಿ ಅ.25ರಂದು ಆತನ ವಿಳಾಸವನ್ನು ಹುಡುಕಿ ಉಳ್ಳಾಲ ದೇರಳಕಟ್ಟೆಯ ಆತ ವಾಸವಿದ್ದ ಅಪಾರ್ಟ್ಮೆಂಟ್ಗೆ ಹೋಗಿದ್ದಾಗ ಕಾರು ಪಾರ್ಕಿಂಗ್ ಸ್ಥಳದಲ್ಲಿರುವುದು ಕಂಡುಬಂದಿದೆ. ವಾಚ್ಮನ್ ಬಳಿ ಮನೆಯ ವಿಳಾಸ ಪಡೆದು ಹೋಗಿ ಆತನ ತಾಯಿಯಲ್ಲಿ ಕಾರಿನ ಬಗ್ಗೆ ವಿನಂತಿಸಿದಾಗ ಅಲ್ಲಿದ್ದ ಶಫಿನ್ನ ಅಣ್ಣ ಮೊಹಮ್ಮದ್ ಶಿಯಾಬ್ ಕೂಡ ತನ್ನ ಮೇಲೆ ಕೈಮಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಜೊತೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಅ. 27ರಂದು ರಾತ್ರಿ 9 ಗಂಟೆ ವೇಳೆ ಮೊಹಮ್ಮದ್ ಶಫೀನ್ ಅಕ್ರಮವಾಗಿ ಯುವತಿಯ ಮನೆಗೆ ಪ್ರವೇಶಿಸಿ, ಆಕೆಯ ಬ್ಯಾಗ್ನಲ್ಲಿದ್ದ 62 ಸಾವಿರ ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿದ್ದ ಎಂದೂ ದೂರಿನಲ್ಲಿ ತಿಳಿಸಲಾಗಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A fridge repair technician in Mangalore has been accused of raping a girl at her home in Kadri. The victim filed a complaint after the incident, which occurred following the repair of her car in Kadri. It is alleged that the accused assisted her during the repair and subsequently went to her home, where the assault took place.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm