ಬ್ರೇಕಿಂಗ್ ನ್ಯೂಸ್
06-12-24 09:25 pm Mangalore Correspondent ಕ್ರೈಂ
ಮಂಗಳೂರು, ಡಿ.6: ವ್ಯಕ್ತಿಯೊಬ್ಬರು ತನ್ನ ಮೊಬೈಲಿಗೆ ಬಂದಿದ್ದ VAHAN PARIVAHAN.apk ಫೈಲ್ ಅನ್ನು ಡೌನ್ಲೋಡ್ ಮಾಡಿದ್ದು, ಇದರ ಬೆನ್ನಲ್ಲೇ ಫ್ಲಿಪ್ ಕಾರ್ಟ್ ಖಾತೆ ಹ್ಯಾಕ್ ಆಗಿದ್ದಲ್ಲದೆ ಸದ್ರಿ ಫ್ಲಿಪ್ ಕಾರ್ಟ್ ಖಾತೆಯ ಮೂಲಕ 1.31 ಲಕ್ಷ ಮೌಲ್ಯದ ವಸ್ತುಗಳನ್ನು ಖರೀದಿಸಿ ಮೋಸ ಎಸಗಿದ ಪ್ರಕರಣ ಮಂಗಳೂರಿನಲ್ಲಿ ನಡೆದಿತ್ತು. ಪ್ರಕರಣದ ಬೆನ್ನು ಹತ್ತಿದ ಸೈಬರ್ ಪೊಲೀಸರು ದೆಹಲಿ ಮೂಲದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಯದುನಂದನ್ (27) ಎಂಬವರು ಹಣ ಕಳಕೊಂಡವರಾಗಿದ್ದು ತನ್ನ ವಾಟ್ಸಾಪ್ ನಂಬರಿಗೆ ಎಪಿಕೆ ಫೈಲ್ ಬಂದಿದ್ದನ್ನು ಡೌನ್ಲೋಡ್ ಮಾಡುತ್ತಿದ್ದಂತೆ ಹಣ ಕಡಿತವಾಗಿತ್ತು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಅ.ಕ್ರ 132/2024 ಕಲಂ : 66ಸಿ, 66ಡಿ, ಐಟಿ ಆಕ್ಟ್ & 318(4) ಬಿಎನ್ಎಸ್ ರಲ್ಲಿ ಪ್ರಕರಣ ದಾಖಲಾಗಿತ್ತು. ಯದುನಂದನ್ ಅವರ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳಿಂದ 1,31,000/- ಮೌಲ್ಯದ ಎರಡು ಮೊಬೈಲ್ ಫೋನ್, 01-ಏರ್ ಪಾಡ್ ಹಾಗೂ ಗಿಫ್ಟ್ ವೋಚರ್ ಗಳನ್ನು ಖರೀದಿ ಮಾಡಿದ್ದರು.
ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಫ್ಲಿಪ್ ಕಾರ್ಟ್ ಕಂಪನಿಯಿಂದ ಮಾಹಿತಿಯನ್ನು ಪಡೆದು ಪ್ರಕರಣ ದಾಖಲಾದ 48 ಗಂಟೆಯೊಳಗೆ ಸೆನ್ ಕ್ರೈಂ ಪೊಲೀಸ್ ಠಾಣಾ ಪಿಎಸ್ಐ ಗುರಪ್ಪ ಕಾಂತಿ ಹಾಗೂ ಪಿಸಿ 2405 ತಿಪ್ಪಾರೆಡ್ಡಿ ದೆಹಲಿಗೆ ವಿಶೇಷ ಕರ್ತವ್ಯದಲ್ಲಿ ತೆರಳಿ ಪ್ರಕರಣದಲ್ಲಿ ಆರೋಪಿತನಾದ ದೆಹಲಿ ಮಾಳ್ವವಿಯಾ ನಗರ ನಿವಾಸಿ ಗೌರವ್ ಮಕ್ವಾನ್ (25) ಎಂಬಾತನನ್ನು ವಶಕ್ಕೆ ಪಡೆದು ಆರೋಪಿಯಿಂದ ಸದ್ರಿ ಪ್ರಕರಣಕ್ಕೆ ಸಂಬಂಧಿಸಿದ 2- ಅಂಡ್ರಾಯ್ಡ್ ಫೋನ್ ಸೇರಿದಂತೆ 5-ಐಪೋನ್ 15, 02-ಏರ್ ಪ್ಯಾಡ್, ಆರೋಪಿ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಸೇರಿದಂತೆ ಒಟ್ಟು 4,00,000/- ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಸೆನ್ ಠಾಣಾಧಿಕಾರಿಯೂ ಆದ ಎಸಿಪಿ ರವೀಶ್ ನಾಯಕ್ ನೇತೃತ್ವದಲ್ಲಿ ಸದ್ರಿ ಪ್ರಕರಣದಲ್ಲಿ ಇನ್ನುಳಿದ ಆರೋಪಿತರ ಪತ್ತೆಗೆ ತನಿಖೆ ಮುಂದುವರೆದಿರುತ್ತದೆ.
The Mangaluru city police have arrested a youth from Delhi allegedly associated with a gang involved in defrauding people by gaining access to their bank accounts by sending android package kit (APK) file to their mobile phones using WhatsApp.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm