ಬ್ರೇಕಿಂಗ್ ನ್ಯೂಸ್
06-12-24 10:42 pm Mangalore Correspondent ಕ್ರೈಂ
ಉಳ್ಳಾಲ, ಡಿ.6: ಉಳ್ಳಾಲ ಪೊಲೀಸ್ ಠಾಣೆಯೊಳಗಡೆ ಬಜರಂಗದಳ ಮುಖಂಡ ಅರ್ಜುನ್ ಮಾಡೂರು ಮೇಲೆ ಹಲ್ಲೆಗೈದಿದ್ದ ಆರೋಪಿ ಹೊಸಂಗಡಿ ,ಕಡಂಬಾರು ನಿವಾಸಿ ಮಹಮ್ಮದ್ ಆಸಿಫ್ ಜಾಮೀನಿನಲ್ಲಿ ಜೈಲಿನಿಂದ ಹೊರ ಬರುತ್ತಲೇ ಆತನ ಮೇಲೆ ಪ್ರತೀಕಾರ ತೀರಿಸಲು ತಲವಾರು ದಾಳಿಗೆ ಯತ್ನಿಸಿದ್ದರೆನ್ನಲಾದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯೆನ್ನಲಾದ ಅರ್ಜುನ್ ಮಾಡೂರನ್ನು ಉಳ್ಳಾಲ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16 ರ ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ಮಧ್ಯೆ ನಡೆದಿದ್ದ ಸಣ್ಣ ಅಪಘಾತ ಪ್ರಕರಣವು ಉಳ್ಳಾಲ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಶರತ್ ಅವರ ಸ್ನೇಹಿತ ಅರ್ಜುನ್ ಮಾಡೂರು ಅವರು ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಇನ್ಸ್ ಪೆಕ್ಟರ್ ಕೊಠಡಿಯೊಳಗೆ ಕಾರು ಚಾಲಕರಾದ ಶರತ್ ,ಖಲೀಲ್ ಜತೆ ರಾಜಿ ಮಾತುಕತೆ ನಡೆಸುತ್ತಿದ್ದ ವೇಳೆ ಖಲೀಲ್ ಸಹೋದರ ಆಸಿಫ್ ಎಂಬಾತ ಅರ್ಜುನ್ ಮಾಡೂರಿಗೆ ಏಕಾಏಕಿ ಹಲ್ಲೆ ನಡೆಸಿದ್ದ.
ಅರ್ಜುನ್ ಮಾಡೂರು ಮೇಲಿನ ಹಲ್ಲೆ ಖಂಡಿಸಿ ಮಧ್ಯರಾತ್ರಿಯೇ ಹಿಂದೂ ಸಂಘಟನೆ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಪೊಲೀಸರು ಆರೋಪಿ ಆಸಿಫ್ ನನ್ನ ವಶಕ್ಕೆ ಪಡೆದು ಕೇಸು ಹಾಕಿ ಜೈಲಿಗೆ ತಳ್ಳಿದ್ದರು. ಕಳೆದ ನ.8ರಂದು ಆರೋಪಿ ಮಹಮ್ಮದ್ ಆಸಿಫ್ ಗೆ ಜಾಮೀನು ದೊರೆತಿತ್ತು. ಆಸಿಫ್ ತನ್ನ ಕುಟುಂಬಸ್ಥರ ಜೊತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ತಲಪಾಡಿ ಬಳಿಯ ಕೆ.ಸಿ ರೋಡ್ ನಿಂದ ಆಗಂತುಕರು ಮಾರಕಾಯುಧಗಳಿಂದ ಬೆನ್ನಟ್ಟಿದ್ದಾರೆಂದು ಆರೋಪಿಸಿ ಉಳ್ಳಾಲ ಠಾಣೆಗೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಉಳ್ಳಾಲ ಪೊಲೀಸರು ಇಡ್ಯ ಈಶ್ವರ ನಗರದ ಅಣ್ಣಪ್ಪ ಸ್ವಾಮಿ ಯಾನೆ ಮನು (24), ಪಡೀಲ್ ನಾರ್ಲದ ಸಚಿನ್ (24), ಪಜೀರು ಪಾದಲ್ ಕೋಡಿಯ ಕುಶಿತ್(18) ಮತ್ತು ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಗಾದ ಅಪ್ರಾಪ್ತನನ್ನ ಬಂಧಿಸಿದ್ದರು. ಆರೋಪಿಗಳಲ್ಲಿ ಕುಶಿತ್ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಇದೀಗ ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಎನ್ನಲಾದ ಅರ್ಜುನ್ ಮಾಡೂರನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
Bajrang dal activist Arjun Madoor arrested over attempt to murder by ullal police in Mangalore. A youth from Kerala assaulted a leader of a Hindu organization inside a police inspector’s room during an inquiry into a car collision, leading to his arrest. Hindu organization workers gathered outside the police station at midnight in protest.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm