ಬ್ರೇಕಿಂಗ್ ನ್ಯೂಸ್
07-12-24 09:48 pm Mangalore Correspondent ಕ್ರೈಂ
ಮಂಗಳೂರು, ಡಿ.7 : ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ದುಪ್ಪಟ್ಟು ಲಾಭ ಸಿಗುತ್ತದೆ ಎಂದು ನಂಬಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರಿಗೆ 46 ಲಕ್ಷ ರೂ. ವಂಚಿಸಿದ ಪ್ರಸಂಗ ನಡೆದಿದ್ದು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರ ವಾಟ್ಸಾಪ್ ನಂಬರ್ ಗೆ ಮೆಸೇಜ್ ಮಾಡಿದ್ದ ಶ್ರದ್ಧಾ ಬೆಲಾನಿ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಷೇರು ಟ್ರೇಡಿಂಗ್ನಲ್ಲಿ ಹಣ ತೊಡಗಿಸಿದರೆ ಶೇ.500ರಷ್ಟು ಲಾಭಾಂಶ ಬರುವುದಾಗಿ ನಂಬಿಸಿದ್ದರು. ಅದರಂತೆ ಈ ವ್ಯಕ್ತಿ ಆತ ಕಳುಹಿಸಿದ ಲಿಂಕ್ ಒತ್ತಿ ಷೇರು ಮಾರುಕಟ್ಟೆಗೆ ರಿಜಿಸ್ಟ್ರೇಷನ್ ಮಾಡಿಕೊಂಡಿದ್ದರು. ನಂತರ ಇವರನ್ನು H 777 ARES Stock Exchange Group ಎಂಬ ವಾಟ್ಸಾಪ್ ಗ್ರೂಪ್ ಸೇರಿಸಿದ್ದರು.
ಗ್ರೂಪ್ನಲ್ಲಿ ಶ್ರದ್ಧಾ ಬೆಲಾನಿ ಎಂಬವರು ಗ್ರೂಪ್ ಅಡ್ಮಿನ್ ಆಗಿದ್ದರು. ಮೊದಲಿಗೆ ಈ ವ್ಯಕ್ತಿ ಸ್ಟಾಕ್ ಖರೀದಿ ಮಾಡಲು ತನ್ನ ಬ್ಯಾಂಕ್ನಿಂದ 2 ಲಕ್ಷ ರೂ. ಹಣವನ್ನು ಆರ್ಟಿಜಿಎಸ್ ಮಾಡಿದ್ದರು. ಮರುದಿನ ಆ ಸ್ಟಾಕ್ ಅನ್ನು ಸೇಲ್ ಮಾಡಿದ್ದು, ಇದರಿಂದ 50,000 ರೂ. ಲಾಭವಾಗಿ ಬಂದಿರುತ್ತದೆ. ಇದನ್ನು ನಂಬಿದ ವ್ಯಕ್ತಿ ಇನ್ನೂ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಅದೇ ಖಾತೆಗೆ ಪುನಃ 5 ಲಕ್ಷ ರೂ. ಹಣವನ್ನು ಹೂಡಿಕೆ ಮಾಡಿದ್ದಾರೆ. ನಂತರ 9,00,000 ರೂ. ಹಣ ಸೇರಿದಂತೆ ನವೆಂಬರ್ 1 ರಿಂದ 19 ರ ವರೆಗೆ ಒಟ್ಟು 29 ಲಕ್ಷ ರೂ. ಹಾಗೂ ನವೆಂಬರ್ 27ರಂದು ಮತ್ತೆ 1 ಲಕ್ಷ ಹಣ ಹೂಡಿಕೆ ಮಾಡಿದ್ದಾರೆ. ಹೀಗೆ ಒಟ್ಟು 46 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು.
ನವೆಂಬರ್ 29 ರಂದು ಈ ವ್ಯಕ್ತಿಗೆ ಹಣದ ಅವಶ್ಯಕತೆ ಇದ್ದುದರಿಂದ 20 ಲಕ್ಷ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದ್ದರು. ಆದರೆ ಹಣ ವಿತ್ ಡ್ರಾ ಮಾಡಲು ಆಗಿರಲಿಲ್ಲ. ಈ ಬಗ್ಗೆ ಶ್ರದ್ಧಾ ಬೆಲಾನಿ ಹಾಗೂ ಗ್ರೂಪ್ ಅಡ್ಮಿನ್ ಆಗಿದ್ದ ಅಭಿಷೇಕ್ ರಾಮ್ ಜೀ ಅವರನ್ನು ಸಂಪರ್ಕಿಸಿದಾಗ ಅವರು ಹಣವನ್ನು ವಾಪಾಸ್ ತೆಗೆಯಬೇಕಾದರೆ ಮತ್ತೆ 8.78 ಲಕ್ಷ ರೂ. ಹಣ ವರ್ಗಾವಣೆ ಮಾಡಿ ನಿಮ್ಮ ಖಾತೆಯನ್ನು ಮುಕ್ತಾಯ ಮಾಡಿಕೊಳ್ಳಬಹುದಾಗಿ ತಿಳಿಸಿದ್ದರು. ಈ ಬಗ್ಗೆ ಅನುಮಾನ ಬಂದ ಈ ವ್ಯಕ್ತಿ ಪೊಲೀಸ್ ದೂರು ದಾಖಲಿಸಿದ್ದಾರೆ.
ಶ್ರದ್ದಾ ಬೆಲಾನಿ ಮತ್ತು ಅಭಿಷೇಕ್ ರಾಮ್ ಜೀ ಎಂಬವರು ಖಾಸಗಿ ಶೇರು ಕಂಪನಿಯ ಹೆಸರಿನಲ್ಲಿ ಆನ್ಲೈನ್ ಮೂಲಕ ಅಕ್ಟೋಬರ್ 24 ರಿಂದ ನವೆಂಬರ್ 27ರ ವರೆಗೆ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 46 ಲಕ್ಷ ಹಣ ಪಾವತಿಸಿ ಬಳಿಕ ಮರು ಪಾವತಿ ಮಾಡದೆ ಮೋಸ ಮಾಡಿದ್ದಾರೆ ಎಂದವರು ದೂರು ನೀಡಿದ್ದಾರೆ.
Fraud in the name of high returns in stock market, Mangalore man looses 46 lakhs. A case has been registered at the cyber crime police station.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm