ಬ್ರೇಕಿಂಗ್ ನ್ಯೂಸ್
08-12-24 05:02 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 08: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಗೃಹಿಣಿಯನ್ನ ಮಕ್ಕಳ ಎದುರೇ ಪ್ರಿಯಕರ ಚಾಕುವಿನಿಂದ ಇರಿದು, ಕೆರೆಗೆ ಬಿಸಾಡಿ ಹತ್ಯೆ ಮಾಡಿರುವ ಘಟನೆ ಕಿಚ್ಚಬ್ಬಿಯಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ರಾಜೇಶ್ ಅವರ ಪತ್ನಿ ತೃಪ್ತಿ (26) ಕೊಲೆಯಾಗಿರುವ ಗೃಹಿಣಿ. ಆರೋಪಿ ಚಿರಂಜೀವಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ಸ್ಥಿರೂರಿನ ತೃಪ್ತಿ ಅವರನ್ನು ಕಿಚ್ಚಬ್ಬಿಯ ರಾಜೇಶ್ ವಿವಾಹವಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಚನ್ನಗಿರಿಯ ಚಿರಂಜೀವಿ ಬೆಂಗಳೂರಿನಲ್ಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತೃಪ್ತಿಗೆ ಪರಿಚಯವಾಗಿತ್ತು.
ಪರಿಚಯ ಪ್ರೀತಿಗೆ ತಿರುಗಿ ತೃಪ್ತಿ ಮಕ್ಕಳನ್ನು ಬಿಟ್ಟು ತಿಂಗಳ ಹಿಂದೆ ಚಿರಂಜೀವಿಯೊಂದಿಗೆ ನಾಪತ್ತೆಯಾಗಿದ್ದರು. ಪತಿ ರಾಜೇಶ್ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೃಪ್ತಿ ಮತ್ತು ಚಿರಂಜೀವಿಯನ್ನು ಬೆಂಗಳೂರಿನ ವಿಜಯಪುರದಲ್ಲಿ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆತಂದು ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿದ್ದರು.
ಬಳಿಕ ಚಿರಂಜೀವಿಯೊಂದಿಗಿನ ಮೊಬೈಲ್, ದೂರವಾಣಿ ಸೇರಿ ಎಲ್ಲ ಸಂಪರ್ಕವನ್ನೂ ಕಡಿತಗೊಳಿಸಿದ್ದರು. ಇದರಿಂದ ಕುಪಿತಗೊಂಡ ಚಿರಂಜೀವಿ, ಪತಿ ರಾಜೇಶ್ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಹೋಗಿ ಎರಡೂವರೆ ವರ್ಷದ ಮಗಳ ಎದುರಿಗೇ ತೃಪ್ತಿಗೆ ಇರಿದಿದ್ದಾನೆ. ಕೂಗಿಕೊಂಡರೂ ಬಿಡದೆ ಸುಮಾರು 500 ಮೀಟರ್ ದೂರ ಕಾಫಿ ತೋಟಕ್ಕೆ ಎಳೆದೊಯ್ದು ಅಲ್ಲಿದ್ದ ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾನೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿದ ಪೊಲೀಸರು ತನಿಖೆ ಆರಂಭಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಡಿವೈಎಸ್ಪಿ ಬಾಲಾಜಿ ಸಿಂಗ್, ಇನ್ಸ್ಪೆಕ್ಟರ್ ಗುರುದತ್ ಕಾಮತ್, ಸಬ್ಇನ್ಸ್ಪೆಕ್ಟರ್ ರವೀಶ್, ನಿರಂಜನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ನಾಲ್ಕು ತಂಡಗಳನ್ನು ರಚಿಸಿದ್ದರು. ಸಂಜೆ ವೇಳೆಗೆ ಚಿರಂಜೀವಿಯನ್ನು ಬಂಧಿಸಿದ್ದಾರೆ
Chikkamagaluru murder, house wife murdered by lover, body found in lake. The deceased has been identified as Trupti. She was in affair with a guy whom she found on social media.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm