ಬ್ರೇಕಿಂಗ್ ನ್ಯೂಸ್
08-12-24 05:02 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 08: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಗೃಹಿಣಿಯನ್ನ ಮಕ್ಕಳ ಎದುರೇ ಪ್ರಿಯಕರ ಚಾಕುವಿನಿಂದ ಇರಿದು, ಕೆರೆಗೆ ಬಿಸಾಡಿ ಹತ್ಯೆ ಮಾಡಿರುವ ಘಟನೆ ಕಿಚ್ಚಬ್ಬಿಯಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ರಾಜೇಶ್ ಅವರ ಪತ್ನಿ ತೃಪ್ತಿ (26) ಕೊಲೆಯಾಗಿರುವ ಗೃಹಿಣಿ. ಆರೋಪಿ ಚಿರಂಜೀವಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ಸ್ಥಿರೂರಿನ ತೃಪ್ತಿ ಅವರನ್ನು ಕಿಚ್ಚಬ್ಬಿಯ ರಾಜೇಶ್ ವಿವಾಹವಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಚನ್ನಗಿರಿಯ ಚಿರಂಜೀವಿ ಬೆಂಗಳೂರಿನಲ್ಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತೃಪ್ತಿಗೆ ಪರಿಚಯವಾಗಿತ್ತು.
ಪರಿಚಯ ಪ್ರೀತಿಗೆ ತಿರುಗಿ ತೃಪ್ತಿ ಮಕ್ಕಳನ್ನು ಬಿಟ್ಟು ತಿಂಗಳ ಹಿಂದೆ ಚಿರಂಜೀವಿಯೊಂದಿಗೆ ನಾಪತ್ತೆಯಾಗಿದ್ದರು. ಪತಿ ರಾಜೇಶ್ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೃಪ್ತಿ ಮತ್ತು ಚಿರಂಜೀವಿಯನ್ನು ಬೆಂಗಳೂರಿನ ವಿಜಯಪುರದಲ್ಲಿ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆತಂದು ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿದ್ದರು.
ಬಳಿಕ ಚಿರಂಜೀವಿಯೊಂದಿಗಿನ ಮೊಬೈಲ್, ದೂರವಾಣಿ ಸೇರಿ ಎಲ್ಲ ಸಂಪರ್ಕವನ್ನೂ ಕಡಿತಗೊಳಿಸಿದ್ದರು. ಇದರಿಂದ ಕುಪಿತಗೊಂಡ ಚಿರಂಜೀವಿ, ಪತಿ ರಾಜೇಶ್ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಹೋಗಿ ಎರಡೂವರೆ ವರ್ಷದ ಮಗಳ ಎದುರಿಗೇ ತೃಪ್ತಿಗೆ ಇರಿದಿದ್ದಾನೆ. ಕೂಗಿಕೊಂಡರೂ ಬಿಡದೆ ಸುಮಾರು 500 ಮೀಟರ್ ದೂರ ಕಾಫಿ ತೋಟಕ್ಕೆ ಎಳೆದೊಯ್ದು ಅಲ್ಲಿದ್ದ ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾನೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿದ ಪೊಲೀಸರು ತನಿಖೆ ಆರಂಭಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಡಿವೈಎಸ್ಪಿ ಬಾಲಾಜಿ ಸಿಂಗ್, ಇನ್ಸ್ಪೆಕ್ಟರ್ ಗುರುದತ್ ಕಾಮತ್, ಸಬ್ಇನ್ಸ್ಪೆಕ್ಟರ್ ರವೀಶ್, ನಿರಂಜನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ನಾಲ್ಕು ತಂಡಗಳನ್ನು ರಚಿಸಿದ್ದರು. ಸಂಜೆ ವೇಳೆಗೆ ಚಿರಂಜೀವಿಯನ್ನು ಬಂಧಿಸಿದ್ದಾರೆ
Chikkamagaluru murder, house wife murdered by lover, body found in lake. The deceased has been identified as Trupti. She was in affair with a guy whom she found on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm