ಬ್ರೇಕಿಂಗ್ ನ್ಯೂಸ್
08-12-24 05:02 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 08: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಗೃಹಿಣಿಯನ್ನ ಮಕ್ಕಳ ಎದುರೇ ಪ್ರಿಯಕರ ಚಾಕುವಿನಿಂದ ಇರಿದು, ಕೆರೆಗೆ ಬಿಸಾಡಿ ಹತ್ಯೆ ಮಾಡಿರುವ ಘಟನೆ ಕಿಚ್ಚಬ್ಬಿಯಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ರಾಜೇಶ್ ಅವರ ಪತ್ನಿ ತೃಪ್ತಿ (26) ಕೊಲೆಯಾಗಿರುವ ಗೃಹಿಣಿ. ಆರೋಪಿ ಚಿರಂಜೀವಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ಸ್ಥಿರೂರಿನ ತೃಪ್ತಿ ಅವರನ್ನು ಕಿಚ್ಚಬ್ಬಿಯ ರಾಜೇಶ್ ವಿವಾಹವಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಚನ್ನಗಿರಿಯ ಚಿರಂಜೀವಿ ಬೆಂಗಳೂರಿನಲ್ಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತೃಪ್ತಿಗೆ ಪರಿಚಯವಾಗಿತ್ತು.
ಪರಿಚಯ ಪ್ರೀತಿಗೆ ತಿರುಗಿ ತೃಪ್ತಿ ಮಕ್ಕಳನ್ನು ಬಿಟ್ಟು ತಿಂಗಳ ಹಿಂದೆ ಚಿರಂಜೀವಿಯೊಂದಿಗೆ ನಾಪತ್ತೆಯಾಗಿದ್ದರು. ಪತಿ ರಾಜೇಶ್ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೃಪ್ತಿ ಮತ್ತು ಚಿರಂಜೀವಿಯನ್ನು ಬೆಂಗಳೂರಿನ ವಿಜಯಪುರದಲ್ಲಿ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆತಂದು ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿದ್ದರು.
ಬಳಿಕ ಚಿರಂಜೀವಿಯೊಂದಿಗಿನ ಮೊಬೈಲ್, ದೂರವಾಣಿ ಸೇರಿ ಎಲ್ಲ ಸಂಪರ್ಕವನ್ನೂ ಕಡಿತಗೊಳಿಸಿದ್ದರು. ಇದರಿಂದ ಕುಪಿತಗೊಂಡ ಚಿರಂಜೀವಿ, ಪತಿ ರಾಜೇಶ್ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಹೋಗಿ ಎರಡೂವರೆ ವರ್ಷದ ಮಗಳ ಎದುರಿಗೇ ತೃಪ್ತಿಗೆ ಇರಿದಿದ್ದಾನೆ. ಕೂಗಿಕೊಂಡರೂ ಬಿಡದೆ ಸುಮಾರು 500 ಮೀಟರ್ ದೂರ ಕಾಫಿ ತೋಟಕ್ಕೆ ಎಳೆದೊಯ್ದು ಅಲ್ಲಿದ್ದ ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾನೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿದ ಪೊಲೀಸರು ತನಿಖೆ ಆರಂಭಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಡಿವೈಎಸ್ಪಿ ಬಾಲಾಜಿ ಸಿಂಗ್, ಇನ್ಸ್ಪೆಕ್ಟರ್ ಗುರುದತ್ ಕಾಮತ್, ಸಬ್ಇನ್ಸ್ಪೆಕ್ಟರ್ ರವೀಶ್, ನಿರಂಜನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ನಾಲ್ಕು ತಂಡಗಳನ್ನು ರಚಿಸಿದ್ದರು. ಸಂಜೆ ವೇಳೆಗೆ ಚಿರಂಜೀವಿಯನ್ನು ಬಂಧಿಸಿದ್ದಾರೆ
Chikkamagaluru murder, house wife murdered by lover, body found in lake. The deceased has been identified as Trupti. She was in affair with a guy whom she found on social media.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm