ಬ್ರೇಕಿಂಗ್ ನ್ಯೂಸ್
08-12-24 05:02 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 08: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಗೃಹಿಣಿಯನ್ನ ಮಕ್ಕಳ ಎದುರೇ ಪ್ರಿಯಕರ ಚಾಕುವಿನಿಂದ ಇರಿದು, ಕೆರೆಗೆ ಬಿಸಾಡಿ ಹತ್ಯೆ ಮಾಡಿರುವ ಘಟನೆ ಕಿಚ್ಚಬ್ಬಿಯಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ರಾಜೇಶ್ ಅವರ ಪತ್ನಿ ತೃಪ್ತಿ (26) ಕೊಲೆಯಾಗಿರುವ ಗೃಹಿಣಿ. ಆರೋಪಿ ಚಿರಂಜೀವಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ಸ್ಥಿರೂರಿನ ತೃಪ್ತಿ ಅವರನ್ನು ಕಿಚ್ಚಬ್ಬಿಯ ರಾಜೇಶ್ ವಿವಾಹವಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಚನ್ನಗಿರಿಯ ಚಿರಂಜೀವಿ ಬೆಂಗಳೂರಿನಲ್ಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತೃಪ್ತಿಗೆ ಪರಿಚಯವಾಗಿತ್ತು.
ಪರಿಚಯ ಪ್ರೀತಿಗೆ ತಿರುಗಿ ತೃಪ್ತಿ ಮಕ್ಕಳನ್ನು ಬಿಟ್ಟು ತಿಂಗಳ ಹಿಂದೆ ಚಿರಂಜೀವಿಯೊಂದಿಗೆ ನಾಪತ್ತೆಯಾಗಿದ್ದರು. ಪತಿ ರಾಜೇಶ್ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೃಪ್ತಿ ಮತ್ತು ಚಿರಂಜೀವಿಯನ್ನು ಬೆಂಗಳೂರಿನ ವಿಜಯಪುರದಲ್ಲಿ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆತಂದು ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿದ್ದರು.
ಬಳಿಕ ಚಿರಂಜೀವಿಯೊಂದಿಗಿನ ಮೊಬೈಲ್, ದೂರವಾಣಿ ಸೇರಿ ಎಲ್ಲ ಸಂಪರ್ಕವನ್ನೂ ಕಡಿತಗೊಳಿಸಿದ್ದರು. ಇದರಿಂದ ಕುಪಿತಗೊಂಡ ಚಿರಂಜೀವಿ, ಪತಿ ರಾಜೇಶ್ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಹೋಗಿ ಎರಡೂವರೆ ವರ್ಷದ ಮಗಳ ಎದುರಿಗೇ ತೃಪ್ತಿಗೆ ಇರಿದಿದ್ದಾನೆ. ಕೂಗಿಕೊಂಡರೂ ಬಿಡದೆ ಸುಮಾರು 500 ಮೀಟರ್ ದೂರ ಕಾಫಿ ತೋಟಕ್ಕೆ ಎಳೆದೊಯ್ದು ಅಲ್ಲಿದ್ದ ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾನೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿದ ಪೊಲೀಸರು ತನಿಖೆ ಆರಂಭಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಡಿವೈಎಸ್ಪಿ ಬಾಲಾಜಿ ಸಿಂಗ್, ಇನ್ಸ್ಪೆಕ್ಟರ್ ಗುರುದತ್ ಕಾಮತ್, ಸಬ್ಇನ್ಸ್ಪೆಕ್ಟರ್ ರವೀಶ್, ನಿರಂಜನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ನಾಲ್ಕು ತಂಡಗಳನ್ನು ರಚಿಸಿದ್ದರು. ಸಂಜೆ ವೇಳೆಗೆ ಚಿರಂಜೀವಿಯನ್ನು ಬಂಧಿಸಿದ್ದಾರೆ
Chikkamagaluru murder, house wife murdered by lover, body found in lake. The deceased has been identified as Trupti. She was in affair with a guy whom she found on social media.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm