ಬ್ರೇಕಿಂಗ್ ನ್ಯೂಸ್
10-12-24 06:46 pm Mangalore Correspondent ಕ್ರೈಂ
ಮಂಗಳೂರು, ಡಿ.10: ಕಂಕನಾಡಿ ಮಾರುಕಟ್ಟೆ ಬಳಿಯಲ್ಲಿ ನಿಲ್ಲಿಸಿದ್ದ ಕ್ರೆಟಾ ಕಾರಿನಿಂದ ಗ್ಲಾಸ್ ಒಡೆದು ಚಿನ್ನಾಭರಣಗಳಿದ್ದ ವ್ಯಾನಿಟಿ ಬ್ಯಾಗನ್ನು ಕಳವು ಮಾಡಿದ್ದ ಪ್ರಕರಣವನ್ನು ಕದ್ರಿ ಪೊಲೀಸರು 24 ಗಂಟೆಯಲ್ಲಿ ಭೇದಿಸಿದ್ದಾರೆ.
ಡಿ.8ರ ಭಾನುವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿತ್ತು. ನಗರದ ಕಂಕನಾಡಿ ಮಾರುಕಟ್ಟೆ ಹತ್ತಿರ ಪಾರ್ಕ್ ಮಾಡಿ ಹೋಗಿದ್ದ ಕ್ರೆಟಾ ಕಾರಿನಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಳ್ಳರು ಗ್ಲಾಸ್ ಒಡೆದು ಕಳವು ಮಾಡಿದ್ದರು. ಬ್ಯಾಗ್ ನಲ್ಲಿ 6.80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲ್ಯಾಪ್ ಟಾಪ್ ಇತ್ತು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ತನಿಖೆ ನಡೆಸಿದ ಎಸ್ಐ ಉಮೇಶ್ ನೇತೃತ್ವದ ಪೊಲೀಸರು ಪರಿಸರದ ಸಿಸಿಟಿವಿಗಳನ್ನು ಆಧರಿಸಿ ತನಿಖೆ ನಡೆಸಿದ್ದರು. ಆರೋಪಿಯನ್ನು ಗುರುತಿಸಿ, ಆತನ ಹಿಂದೆ ಬಿದ್ದಿದ್ದರು. ನಿನ್ನೆ ರಾತ್ರಿ (ಡಿ.9) 10.30ರ ವೇಳೆಗೆ ಕಂಕನಾಡಿ ಪರಿಸರದ ಮೆಡಿಕಲ್ ಒಂದಕ್ಕೆ ಇನ್ನೊಬ್ಬ ಯುವಕನ ಜೊತೆಗೆ ಬಂದಿದ್ದ. ಅದೇ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಅಡ್ಯಾರ್ ಪದವು ನಿವಾಸಿ ಅಬ್ದುಲ್ ಅಕ್ರಮ್ (33) ಎಂದು ಗುರುತಿಸಲಾಗಿದೆ.
ಅಕ್ರಮ್ ಮೊದಲ ಬಾರಿಗೆ ಕಳವು ಕೃತ್ಯ ನಡೆಸಿದ್ದು, ಆರೋಪಿಯನ್ನು ಪೊಲೀಸರು ಹಿಂದೆ ಬಿದ್ದು 24 ಗಂಟೆಯೊಳಗೆ ಬಂಧಿಸಿದ್ದೇ ರೋಚಕ. ಕೃತ್ಯಕ್ಕೆ ಬಳಸಿದ್ದ ಆಕ್ಸೆಸ್ ಸ್ಕೂಟರ್ ಹಾಗೂ ಚಿನ್ನಾಭರಣ, ಲ್ಯಾಪ್ ಟಾಪ್ ಸೇರಿದಂತೆ 7.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದೂರುದಾರ ಮಹಿಳೆ ಕೋಣಾಜೆಯವರಾಗಿದ್ದು, ತಾಯಿ ಮನೆಯಿಂದ ರಾತ್ರಿ ಗಂಡನ ಮನೆಗೆ ತೆರಳುತ್ತಿದ್ದರು. ರಾತ್ರಿ ಲೇಟ್ ಆಗಿದ್ದರಿಂದ ಊಟ ಮಾಡ್ಕೊಂಡು ಹೋಗೋಣ ಎಂದು ಕಾರನ್ನು ಕಂಕನಾಡಿಯಲ್ಲಿ ನಿಲ್ಲಿಸಿ ಹೊಟೇಲ್ ಹೋಗಿದ್ದರು. ಅಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಎಗರಿಸಲಾಗಿತ್ತು.
Mangalore Kadri police nab accused within 24 hrs of theft at Kankandy, recover gold worth Rs 7.3 lakhs. Acting swiftly, the police team traced and arrested Abdul Akram, aged 33, a resident of Adyar village, Mangaluru taluk.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm