ಬ್ರೇಕಿಂಗ್ ನ್ಯೂಸ್
10-12-24 06:46 pm Mangalore Correspondent ಕ್ರೈಂ
ಮಂಗಳೂರು, ಡಿ.10: ಕಂಕನಾಡಿ ಮಾರುಕಟ್ಟೆ ಬಳಿಯಲ್ಲಿ ನಿಲ್ಲಿಸಿದ್ದ ಕ್ರೆಟಾ ಕಾರಿನಿಂದ ಗ್ಲಾಸ್ ಒಡೆದು ಚಿನ್ನಾಭರಣಗಳಿದ್ದ ವ್ಯಾನಿಟಿ ಬ್ಯಾಗನ್ನು ಕಳವು ಮಾಡಿದ್ದ ಪ್ರಕರಣವನ್ನು ಕದ್ರಿ ಪೊಲೀಸರು 24 ಗಂಟೆಯಲ್ಲಿ ಭೇದಿಸಿದ್ದಾರೆ.
ಡಿ.8ರ ಭಾನುವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿತ್ತು. ನಗರದ ಕಂಕನಾಡಿ ಮಾರುಕಟ್ಟೆ ಹತ್ತಿರ ಪಾರ್ಕ್ ಮಾಡಿ ಹೋಗಿದ್ದ ಕ್ರೆಟಾ ಕಾರಿನಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಳ್ಳರು ಗ್ಲಾಸ್ ಒಡೆದು ಕಳವು ಮಾಡಿದ್ದರು. ಬ್ಯಾಗ್ ನಲ್ಲಿ 6.80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲ್ಯಾಪ್ ಟಾಪ್ ಇತ್ತು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ತನಿಖೆ ನಡೆಸಿದ ಎಸ್ಐ ಉಮೇಶ್ ನೇತೃತ್ವದ ಪೊಲೀಸರು ಪರಿಸರದ ಸಿಸಿಟಿವಿಗಳನ್ನು ಆಧರಿಸಿ ತನಿಖೆ ನಡೆಸಿದ್ದರು. ಆರೋಪಿಯನ್ನು ಗುರುತಿಸಿ, ಆತನ ಹಿಂದೆ ಬಿದ್ದಿದ್ದರು. ನಿನ್ನೆ ರಾತ್ರಿ (ಡಿ.9) 10.30ರ ವೇಳೆಗೆ ಕಂಕನಾಡಿ ಪರಿಸರದ ಮೆಡಿಕಲ್ ಒಂದಕ್ಕೆ ಇನ್ನೊಬ್ಬ ಯುವಕನ ಜೊತೆಗೆ ಬಂದಿದ್ದ. ಅದೇ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಅಡ್ಯಾರ್ ಪದವು ನಿವಾಸಿ ಅಬ್ದುಲ್ ಅಕ್ರಮ್ (33) ಎಂದು ಗುರುತಿಸಲಾಗಿದೆ.
ಅಕ್ರಮ್ ಮೊದಲ ಬಾರಿಗೆ ಕಳವು ಕೃತ್ಯ ನಡೆಸಿದ್ದು, ಆರೋಪಿಯನ್ನು ಪೊಲೀಸರು ಹಿಂದೆ ಬಿದ್ದು 24 ಗಂಟೆಯೊಳಗೆ ಬಂಧಿಸಿದ್ದೇ ರೋಚಕ. ಕೃತ್ಯಕ್ಕೆ ಬಳಸಿದ್ದ ಆಕ್ಸೆಸ್ ಸ್ಕೂಟರ್ ಹಾಗೂ ಚಿನ್ನಾಭರಣ, ಲ್ಯಾಪ್ ಟಾಪ್ ಸೇರಿದಂತೆ 7.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದೂರುದಾರ ಮಹಿಳೆ ಕೋಣಾಜೆಯವರಾಗಿದ್ದು, ತಾಯಿ ಮನೆಯಿಂದ ರಾತ್ರಿ ಗಂಡನ ಮನೆಗೆ ತೆರಳುತ್ತಿದ್ದರು. ರಾತ್ರಿ ಲೇಟ್ ಆಗಿದ್ದರಿಂದ ಊಟ ಮಾಡ್ಕೊಂಡು ಹೋಗೋಣ ಎಂದು ಕಾರನ್ನು ಕಂಕನಾಡಿಯಲ್ಲಿ ನಿಲ್ಲಿಸಿ ಹೊಟೇಲ್ ಹೋಗಿದ್ದರು. ಅಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಎಗರಿಸಲಾಗಿತ್ತು.
Mangalore Kadri police nab accused within 24 hrs of theft at Kankandy, recover gold worth Rs 7.3 lakhs. Acting swiftly, the police team traced and arrested Abdul Akram, aged 33, a resident of Adyar village, Mangaluru taluk.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm