ಬ್ರೇಕಿಂಗ್ ನ್ಯೂಸ್
10-12-24 06:46 pm Mangalore Correspondent ಕ್ರೈಂ
ಮಂಗಳೂರು, ಡಿ.10: ಕಂಕನಾಡಿ ಮಾರುಕಟ್ಟೆ ಬಳಿಯಲ್ಲಿ ನಿಲ್ಲಿಸಿದ್ದ ಕ್ರೆಟಾ ಕಾರಿನಿಂದ ಗ್ಲಾಸ್ ಒಡೆದು ಚಿನ್ನಾಭರಣಗಳಿದ್ದ ವ್ಯಾನಿಟಿ ಬ್ಯಾಗನ್ನು ಕಳವು ಮಾಡಿದ್ದ ಪ್ರಕರಣವನ್ನು ಕದ್ರಿ ಪೊಲೀಸರು 24 ಗಂಟೆಯಲ್ಲಿ ಭೇದಿಸಿದ್ದಾರೆ.
ಡಿ.8ರ ಭಾನುವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿತ್ತು. ನಗರದ ಕಂಕನಾಡಿ ಮಾರುಕಟ್ಟೆ ಹತ್ತಿರ ಪಾರ್ಕ್ ಮಾಡಿ ಹೋಗಿದ್ದ ಕ್ರೆಟಾ ಕಾರಿನಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಳ್ಳರು ಗ್ಲಾಸ್ ಒಡೆದು ಕಳವು ಮಾಡಿದ್ದರು. ಬ್ಯಾಗ್ ನಲ್ಲಿ 6.80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲ್ಯಾಪ್ ಟಾಪ್ ಇತ್ತು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ತನಿಖೆ ನಡೆಸಿದ ಎಸ್ಐ ಉಮೇಶ್ ನೇತೃತ್ವದ ಪೊಲೀಸರು ಪರಿಸರದ ಸಿಸಿಟಿವಿಗಳನ್ನು ಆಧರಿಸಿ ತನಿಖೆ ನಡೆಸಿದ್ದರು. ಆರೋಪಿಯನ್ನು ಗುರುತಿಸಿ, ಆತನ ಹಿಂದೆ ಬಿದ್ದಿದ್ದರು. ನಿನ್ನೆ ರಾತ್ರಿ (ಡಿ.9) 10.30ರ ವೇಳೆಗೆ ಕಂಕನಾಡಿ ಪರಿಸರದ ಮೆಡಿಕಲ್ ಒಂದಕ್ಕೆ ಇನ್ನೊಬ್ಬ ಯುವಕನ ಜೊತೆಗೆ ಬಂದಿದ್ದ. ಅದೇ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಅಡ್ಯಾರ್ ಪದವು ನಿವಾಸಿ ಅಬ್ದುಲ್ ಅಕ್ರಮ್ (33) ಎಂದು ಗುರುತಿಸಲಾಗಿದೆ.
ಅಕ್ರಮ್ ಮೊದಲ ಬಾರಿಗೆ ಕಳವು ಕೃತ್ಯ ನಡೆಸಿದ್ದು, ಆರೋಪಿಯನ್ನು ಪೊಲೀಸರು ಹಿಂದೆ ಬಿದ್ದು 24 ಗಂಟೆಯೊಳಗೆ ಬಂಧಿಸಿದ್ದೇ ರೋಚಕ. ಕೃತ್ಯಕ್ಕೆ ಬಳಸಿದ್ದ ಆಕ್ಸೆಸ್ ಸ್ಕೂಟರ್ ಹಾಗೂ ಚಿನ್ನಾಭರಣ, ಲ್ಯಾಪ್ ಟಾಪ್ ಸೇರಿದಂತೆ 7.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದೂರುದಾರ ಮಹಿಳೆ ಕೋಣಾಜೆಯವರಾಗಿದ್ದು, ತಾಯಿ ಮನೆಯಿಂದ ರಾತ್ರಿ ಗಂಡನ ಮನೆಗೆ ತೆರಳುತ್ತಿದ್ದರು. ರಾತ್ರಿ ಲೇಟ್ ಆಗಿದ್ದರಿಂದ ಊಟ ಮಾಡ್ಕೊಂಡು ಹೋಗೋಣ ಎಂದು ಕಾರನ್ನು ಕಂಕನಾಡಿಯಲ್ಲಿ ನಿಲ್ಲಿಸಿ ಹೊಟೇಲ್ ಹೋಗಿದ್ದರು. ಅಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಎಗರಿಸಲಾಗಿತ್ತು.
Mangalore Kadri police nab accused within 24 hrs of theft at Kankandy, recover gold worth Rs 7.3 lakhs. Acting swiftly, the police team traced and arrested Abdul Akram, aged 33, a resident of Adyar village, Mangaluru taluk.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm