ಬ್ರೇಕಿಂಗ್ ನ್ಯೂಸ್
11-12-24 03:57 pm Mangalore Correspondent ಕ್ರೈಂ
ಮಂಗಳೂರು, ಡಿ.11: ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ವ್ಯಕ್ತಿಯೊಬ್ಬರಿಂದ 28.18 ಲಕ್ಷ ರೂಪಾಯಿ ಪೀಕಿಸಿದ್ದ ಪ್ರಕರಣದಲ್ಲಿ ಮತ್ತೆ ಇಬ್ಬರು ಕಾಶ್ಮೀರ ಮೂಲದ ಆರೋಪಿಗಳನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಜಮ್ಮು ಕಾಶ್ಮೀರದ ಅಮೀರ್ ಸುಹೇಲ್ ಹಾಗೂ ಸುಹೇಲ್ ಅಹ್ಮದ್ ವಾನಿ ಬಂಧಿತರು. ಪ್ರಕರಣದಲ್ಲಿ ಬೆಂಗಳೂರು ಹಾಗೂ ಮೈಸೂರು ಮೂಲದ ಐವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದರು. ಅವರ ನೀಡಿದ ಮಾಹಿತಿ ಆಧರಿಸಿ ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಸುಹೇಲ್ ಅಹ್ಮದ್ ಮತ್ತು ಅಮೀರ್ ಸುಹೇಲ್ ಬೆಂಗಳೂರಿನಲ್ಲಿದ್ದುಕೊಂಡು ಹಲವು ಬ್ಯಾಂಕುಗಳಲ್ಲಿ ಬೇರೆ ಬೇರೆಯವರ ಹೆಸರಿನಲ್ಲಿ ಖಾತೆಗಳನ್ನು ಮಾಡಿಸಿದ್ದರು. ಬೇರೆ ಬೇರೆಯವರಿಂದ ದಿನಕ್ಕೆ ಮೂರರಿಂದ ನಾಲ್ಕು ಸಾವಿರ ರೂ. ಗಳಿಸುವ ಉದ್ದೇಶದಿಂದ ಬ್ಯಾಂಕ್ ಖಾತೆಗಳನ್ನು ಬಳಸಿಕೊಳ್ಳಲು ಮಾರಾಟ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ದೂರುದಾರರ ಮೊಬೈಲಿಗೆ ಜು.21ರಂದು ಪಾರ್ಟ್ ಟೈಮ್ ಜಾಬ್ ಬಗ್ಗೆ ವಾಟ್ಸಪ್ ಮೆಸೇಜ್ ಬಂದಿತ್ತು. ಬಳಿಕ ಟೆಲಿಗ್ರಾಮ್ ಏಪ್ ಲಿಂಕ್ ಕಳುಹಿಸಿ, ಅದನ್ನು ಓಪನ್ ಮಾಡುವಂತೆ ತಿಳಿಸಿದ್ದರು. ಪಾರ್ಟ್ ಟೈಮ್ ಜಾಬ್ ಏನೆಂದು ಕೇಳಿದಾಗ, ಅವರಿಗೆ ಒಂದು ವಿಡಿಯೋ ಕಳುಹಿಸಿ ಅದರ ಸ್ಕ್ರೀನ್ ಶಾಟ್ ಕಳಿಸಲು ತಿಳಿಸಿದ್ದರು. ಸ್ಕ್ರೀನ್ ಶಾಟ್ ಕಳಿಸಿದ ಬೆನ್ನಲ್ಲೇ ಇವರಿಗೆ 130 ರೂಪಾಯಿ ಬ್ಯಾಂಕ್ ಖಾತೆಗೆ ಕಳಿಸಿದ್ದರು. ಆನಂತರ, ಆ ವಿಡಿಯೋ ತಪ್ಪಾಗಿದೆ, ಅದನ್ನು ಸರಿ ಮಾಡಲು ಇನ್ನೊಂದು ಟೆಲಿಗ್ರಾಮ್ ಏಪ್ ಲಿಂಕ್ ಕಳುಹಿಸಿದ್ದರು. ಲಿಂಕ್ ಓಪನ್ ಮಾಡಿದಾಗ, ಆರೋಪಿಗಳು ಒಂದು ಸಾವಿರ ರೂ. ಹಾಕಲು ಹೇಳಿದ್ದಾರೆ. ಆನಂತರ, ಇದೇ ರೀತಿ ಹೆಚ್ಚು ಹಣ ಕಳಿಸಿದರೆ ಲಾಭ ಹೆಚ್ಚು ಎಂದು ನಂಬಿಸಿ ಬೇರೆ ಬೇರೆ ಖಾತೆಗಳಿಗೆ ಹಣ ಕಳಿಸಲು ಹೇಳಿದ್ದು ಅದರಂತೆ ಬರೋಬ್ಬರಿ 28 ಲಕ್ಷ ರೂ. ಹಣವನ್ನು ಪಾವತಿ ಮಾಡಿದ್ದರು.
ಆದರೆ ಕಳಿಸಿದ ಹಣ ಮರಳಿ ಸಿಗುವುದಿಲ್ಲ ಎಂದು ತಿಳಿಯುತ್ತಿದ್ದಂತೆ ಮೋಸದ ಅರಿವಾಗಿದ್ದು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Konaje police arrest two from Kashmir for swindling Rs 28.18 lac from victim in online job scam. The arrested individuals have been identified as Amir Suhail, a resident of Neelasandra, Bengaluru, and Suhail Ahmad Wani, a resident of Kashmir.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm