ಬ್ರೇಕಿಂಗ್ ನ್ಯೂಸ್
11-12-24 03:57 pm Mangalore Correspondent ಕ್ರೈಂ
ಮಂಗಳೂರು, ಡಿ.11: ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ವ್ಯಕ್ತಿಯೊಬ್ಬರಿಂದ 28.18 ಲಕ್ಷ ರೂಪಾಯಿ ಪೀಕಿಸಿದ್ದ ಪ್ರಕರಣದಲ್ಲಿ ಮತ್ತೆ ಇಬ್ಬರು ಕಾಶ್ಮೀರ ಮೂಲದ ಆರೋಪಿಗಳನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಜಮ್ಮು ಕಾಶ್ಮೀರದ ಅಮೀರ್ ಸುಹೇಲ್ ಹಾಗೂ ಸುಹೇಲ್ ಅಹ್ಮದ್ ವಾನಿ ಬಂಧಿತರು. ಪ್ರಕರಣದಲ್ಲಿ ಬೆಂಗಳೂರು ಹಾಗೂ ಮೈಸೂರು ಮೂಲದ ಐವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದರು. ಅವರ ನೀಡಿದ ಮಾಹಿತಿ ಆಧರಿಸಿ ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಸುಹೇಲ್ ಅಹ್ಮದ್ ಮತ್ತು ಅಮೀರ್ ಸುಹೇಲ್ ಬೆಂಗಳೂರಿನಲ್ಲಿದ್ದುಕೊಂಡು ಹಲವು ಬ್ಯಾಂಕುಗಳಲ್ಲಿ ಬೇರೆ ಬೇರೆಯವರ ಹೆಸರಿನಲ್ಲಿ ಖಾತೆಗಳನ್ನು ಮಾಡಿಸಿದ್ದರು. ಬೇರೆ ಬೇರೆಯವರಿಂದ ದಿನಕ್ಕೆ ಮೂರರಿಂದ ನಾಲ್ಕು ಸಾವಿರ ರೂ. ಗಳಿಸುವ ಉದ್ದೇಶದಿಂದ ಬ್ಯಾಂಕ್ ಖಾತೆಗಳನ್ನು ಬಳಸಿಕೊಳ್ಳಲು ಮಾರಾಟ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ದೂರುದಾರರ ಮೊಬೈಲಿಗೆ ಜು.21ರಂದು ಪಾರ್ಟ್ ಟೈಮ್ ಜಾಬ್ ಬಗ್ಗೆ ವಾಟ್ಸಪ್ ಮೆಸೇಜ್ ಬಂದಿತ್ತು. ಬಳಿಕ ಟೆಲಿಗ್ರಾಮ್ ಏಪ್ ಲಿಂಕ್ ಕಳುಹಿಸಿ, ಅದನ್ನು ಓಪನ್ ಮಾಡುವಂತೆ ತಿಳಿಸಿದ್ದರು. ಪಾರ್ಟ್ ಟೈಮ್ ಜಾಬ್ ಏನೆಂದು ಕೇಳಿದಾಗ, ಅವರಿಗೆ ಒಂದು ವಿಡಿಯೋ ಕಳುಹಿಸಿ ಅದರ ಸ್ಕ್ರೀನ್ ಶಾಟ್ ಕಳಿಸಲು ತಿಳಿಸಿದ್ದರು. ಸ್ಕ್ರೀನ್ ಶಾಟ್ ಕಳಿಸಿದ ಬೆನ್ನಲ್ಲೇ ಇವರಿಗೆ 130 ರೂಪಾಯಿ ಬ್ಯಾಂಕ್ ಖಾತೆಗೆ ಕಳಿಸಿದ್ದರು. ಆನಂತರ, ಆ ವಿಡಿಯೋ ತಪ್ಪಾಗಿದೆ, ಅದನ್ನು ಸರಿ ಮಾಡಲು ಇನ್ನೊಂದು ಟೆಲಿಗ್ರಾಮ್ ಏಪ್ ಲಿಂಕ್ ಕಳುಹಿಸಿದ್ದರು. ಲಿಂಕ್ ಓಪನ್ ಮಾಡಿದಾಗ, ಆರೋಪಿಗಳು ಒಂದು ಸಾವಿರ ರೂ. ಹಾಕಲು ಹೇಳಿದ್ದಾರೆ. ಆನಂತರ, ಇದೇ ರೀತಿ ಹೆಚ್ಚು ಹಣ ಕಳಿಸಿದರೆ ಲಾಭ ಹೆಚ್ಚು ಎಂದು ನಂಬಿಸಿ ಬೇರೆ ಬೇರೆ ಖಾತೆಗಳಿಗೆ ಹಣ ಕಳಿಸಲು ಹೇಳಿದ್ದು ಅದರಂತೆ ಬರೋಬ್ಬರಿ 28 ಲಕ್ಷ ರೂ. ಹಣವನ್ನು ಪಾವತಿ ಮಾಡಿದ್ದರು.
ಆದರೆ ಕಳಿಸಿದ ಹಣ ಮರಳಿ ಸಿಗುವುದಿಲ್ಲ ಎಂದು ತಿಳಿಯುತ್ತಿದ್ದಂತೆ ಮೋಸದ ಅರಿವಾಗಿದ್ದು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Konaje police arrest two from Kashmir for swindling Rs 28.18 lac from victim in online job scam. The arrested individuals have been identified as Amir Suhail, a resident of Neelasandra, Bengaluru, and Suhail Ahmad Wani, a resident of Kashmir.
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm