ಬ್ರೇಕಿಂಗ್ ನ್ಯೂಸ್
11-12-24 03:57 pm Mangalore Correspondent ಕ್ರೈಂ
ಮಂಗಳೂರು, ಡಿ.11: ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ವ್ಯಕ್ತಿಯೊಬ್ಬರಿಂದ 28.18 ಲಕ್ಷ ರೂಪಾಯಿ ಪೀಕಿಸಿದ್ದ ಪ್ರಕರಣದಲ್ಲಿ ಮತ್ತೆ ಇಬ್ಬರು ಕಾಶ್ಮೀರ ಮೂಲದ ಆರೋಪಿಗಳನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಜಮ್ಮು ಕಾಶ್ಮೀರದ ಅಮೀರ್ ಸುಹೇಲ್ ಹಾಗೂ ಸುಹೇಲ್ ಅಹ್ಮದ್ ವಾನಿ ಬಂಧಿತರು. ಪ್ರಕರಣದಲ್ಲಿ ಬೆಂಗಳೂರು ಹಾಗೂ ಮೈಸೂರು ಮೂಲದ ಐವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದರು. ಅವರ ನೀಡಿದ ಮಾಹಿತಿ ಆಧರಿಸಿ ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಸುಹೇಲ್ ಅಹ್ಮದ್ ಮತ್ತು ಅಮೀರ್ ಸುಹೇಲ್ ಬೆಂಗಳೂರಿನಲ್ಲಿದ್ದುಕೊಂಡು ಹಲವು ಬ್ಯಾಂಕುಗಳಲ್ಲಿ ಬೇರೆ ಬೇರೆಯವರ ಹೆಸರಿನಲ್ಲಿ ಖಾತೆಗಳನ್ನು ಮಾಡಿಸಿದ್ದರು. ಬೇರೆ ಬೇರೆಯವರಿಂದ ದಿನಕ್ಕೆ ಮೂರರಿಂದ ನಾಲ್ಕು ಸಾವಿರ ರೂ. ಗಳಿಸುವ ಉದ್ದೇಶದಿಂದ ಬ್ಯಾಂಕ್ ಖಾತೆಗಳನ್ನು ಬಳಸಿಕೊಳ್ಳಲು ಮಾರಾಟ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ದೂರುದಾರರ ಮೊಬೈಲಿಗೆ ಜು.21ರಂದು ಪಾರ್ಟ್ ಟೈಮ್ ಜಾಬ್ ಬಗ್ಗೆ ವಾಟ್ಸಪ್ ಮೆಸೇಜ್ ಬಂದಿತ್ತು. ಬಳಿಕ ಟೆಲಿಗ್ರಾಮ್ ಏಪ್ ಲಿಂಕ್ ಕಳುಹಿಸಿ, ಅದನ್ನು ಓಪನ್ ಮಾಡುವಂತೆ ತಿಳಿಸಿದ್ದರು. ಪಾರ್ಟ್ ಟೈಮ್ ಜಾಬ್ ಏನೆಂದು ಕೇಳಿದಾಗ, ಅವರಿಗೆ ಒಂದು ವಿಡಿಯೋ ಕಳುಹಿಸಿ ಅದರ ಸ್ಕ್ರೀನ್ ಶಾಟ್ ಕಳಿಸಲು ತಿಳಿಸಿದ್ದರು. ಸ್ಕ್ರೀನ್ ಶಾಟ್ ಕಳಿಸಿದ ಬೆನ್ನಲ್ಲೇ ಇವರಿಗೆ 130 ರೂಪಾಯಿ ಬ್ಯಾಂಕ್ ಖಾತೆಗೆ ಕಳಿಸಿದ್ದರು. ಆನಂತರ, ಆ ವಿಡಿಯೋ ತಪ್ಪಾಗಿದೆ, ಅದನ್ನು ಸರಿ ಮಾಡಲು ಇನ್ನೊಂದು ಟೆಲಿಗ್ರಾಮ್ ಏಪ್ ಲಿಂಕ್ ಕಳುಹಿಸಿದ್ದರು. ಲಿಂಕ್ ಓಪನ್ ಮಾಡಿದಾಗ, ಆರೋಪಿಗಳು ಒಂದು ಸಾವಿರ ರೂ. ಹಾಕಲು ಹೇಳಿದ್ದಾರೆ. ಆನಂತರ, ಇದೇ ರೀತಿ ಹೆಚ್ಚು ಹಣ ಕಳಿಸಿದರೆ ಲಾಭ ಹೆಚ್ಚು ಎಂದು ನಂಬಿಸಿ ಬೇರೆ ಬೇರೆ ಖಾತೆಗಳಿಗೆ ಹಣ ಕಳಿಸಲು ಹೇಳಿದ್ದು ಅದರಂತೆ ಬರೋಬ್ಬರಿ 28 ಲಕ್ಷ ರೂ. ಹಣವನ್ನು ಪಾವತಿ ಮಾಡಿದ್ದರು.
ಆದರೆ ಕಳಿಸಿದ ಹಣ ಮರಳಿ ಸಿಗುವುದಿಲ್ಲ ಎಂದು ತಿಳಿಯುತ್ತಿದ್ದಂತೆ ಮೋಸದ ಅರಿವಾಗಿದ್ದು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Konaje police arrest two from Kashmir for swindling Rs 28.18 lac from victim in online job scam. The arrested individuals have been identified as Amir Suhail, a resident of Neelasandra, Bengaluru, and Suhail Ahmad Wani, a resident of Kashmir.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm