ಬ್ರೇಕಿಂಗ್ ನ್ಯೂಸ್
11-12-24 03:57 pm Mangalore Correspondent ಕ್ರೈಂ
ಮಂಗಳೂರು, ಡಿ.11: ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ವ್ಯಕ್ತಿಯೊಬ್ಬರಿಂದ 28.18 ಲಕ್ಷ ರೂಪಾಯಿ ಪೀಕಿಸಿದ್ದ ಪ್ರಕರಣದಲ್ಲಿ ಮತ್ತೆ ಇಬ್ಬರು ಕಾಶ್ಮೀರ ಮೂಲದ ಆರೋಪಿಗಳನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಜಮ್ಮು ಕಾಶ್ಮೀರದ ಅಮೀರ್ ಸುಹೇಲ್ ಹಾಗೂ ಸುಹೇಲ್ ಅಹ್ಮದ್ ವಾನಿ ಬಂಧಿತರು. ಪ್ರಕರಣದಲ್ಲಿ ಬೆಂಗಳೂರು ಹಾಗೂ ಮೈಸೂರು ಮೂಲದ ಐವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದರು. ಅವರ ನೀಡಿದ ಮಾಹಿತಿ ಆಧರಿಸಿ ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಸುಹೇಲ್ ಅಹ್ಮದ್ ಮತ್ತು ಅಮೀರ್ ಸುಹೇಲ್ ಬೆಂಗಳೂರಿನಲ್ಲಿದ್ದುಕೊಂಡು ಹಲವು ಬ್ಯಾಂಕುಗಳಲ್ಲಿ ಬೇರೆ ಬೇರೆಯವರ ಹೆಸರಿನಲ್ಲಿ ಖಾತೆಗಳನ್ನು ಮಾಡಿಸಿದ್ದರು. ಬೇರೆ ಬೇರೆಯವರಿಂದ ದಿನಕ್ಕೆ ಮೂರರಿಂದ ನಾಲ್ಕು ಸಾವಿರ ರೂ. ಗಳಿಸುವ ಉದ್ದೇಶದಿಂದ ಬ್ಯಾಂಕ್ ಖಾತೆಗಳನ್ನು ಬಳಸಿಕೊಳ್ಳಲು ಮಾರಾಟ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ದೂರುದಾರರ ಮೊಬೈಲಿಗೆ ಜು.21ರಂದು ಪಾರ್ಟ್ ಟೈಮ್ ಜಾಬ್ ಬಗ್ಗೆ ವಾಟ್ಸಪ್ ಮೆಸೇಜ್ ಬಂದಿತ್ತು. ಬಳಿಕ ಟೆಲಿಗ್ರಾಮ್ ಏಪ್ ಲಿಂಕ್ ಕಳುಹಿಸಿ, ಅದನ್ನು ಓಪನ್ ಮಾಡುವಂತೆ ತಿಳಿಸಿದ್ದರು. ಪಾರ್ಟ್ ಟೈಮ್ ಜಾಬ್ ಏನೆಂದು ಕೇಳಿದಾಗ, ಅವರಿಗೆ ಒಂದು ವಿಡಿಯೋ ಕಳುಹಿಸಿ ಅದರ ಸ್ಕ್ರೀನ್ ಶಾಟ್ ಕಳಿಸಲು ತಿಳಿಸಿದ್ದರು. ಸ್ಕ್ರೀನ್ ಶಾಟ್ ಕಳಿಸಿದ ಬೆನ್ನಲ್ಲೇ ಇವರಿಗೆ 130 ರೂಪಾಯಿ ಬ್ಯಾಂಕ್ ಖಾತೆಗೆ ಕಳಿಸಿದ್ದರು. ಆನಂತರ, ಆ ವಿಡಿಯೋ ತಪ್ಪಾಗಿದೆ, ಅದನ್ನು ಸರಿ ಮಾಡಲು ಇನ್ನೊಂದು ಟೆಲಿಗ್ರಾಮ್ ಏಪ್ ಲಿಂಕ್ ಕಳುಹಿಸಿದ್ದರು. ಲಿಂಕ್ ಓಪನ್ ಮಾಡಿದಾಗ, ಆರೋಪಿಗಳು ಒಂದು ಸಾವಿರ ರೂ. ಹಾಕಲು ಹೇಳಿದ್ದಾರೆ. ಆನಂತರ, ಇದೇ ರೀತಿ ಹೆಚ್ಚು ಹಣ ಕಳಿಸಿದರೆ ಲಾಭ ಹೆಚ್ಚು ಎಂದು ನಂಬಿಸಿ ಬೇರೆ ಬೇರೆ ಖಾತೆಗಳಿಗೆ ಹಣ ಕಳಿಸಲು ಹೇಳಿದ್ದು ಅದರಂತೆ ಬರೋಬ್ಬರಿ 28 ಲಕ್ಷ ರೂ. ಹಣವನ್ನು ಪಾವತಿ ಮಾಡಿದ್ದರು.
ಆದರೆ ಕಳಿಸಿದ ಹಣ ಮರಳಿ ಸಿಗುವುದಿಲ್ಲ ಎಂದು ತಿಳಿಯುತ್ತಿದ್ದಂತೆ ಮೋಸದ ಅರಿವಾಗಿದ್ದು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Konaje police arrest two from Kashmir for swindling Rs 28.18 lac from victim in online job scam. The arrested individuals have been identified as Amir Suhail, a resident of Neelasandra, Bengaluru, and Suhail Ahmad Wani, a resident of Kashmir.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm