ಬ್ರೇಕಿಂಗ್ ನ್ಯೂಸ್
11-12-24 10:39 pm Udupi Correspondent ಕ್ರೈಂ
ಉಡುಪಿ, ಡಿ.11: ದೇಶದ ವಿವಿಧೆಡೆ ಸ್ಟಾರ್ ಹೊಟೇಲ್ ಗಳಲ್ಲಿ ಕೊಠಡಿ ಪಡೆದು ಊಟ ತಿಂಡಿ ತಿಂದು ಸಾವಿರಾರು ರೂ. ಬಿಲ್ ಮಾಡಿ ಬಳಿಕ ಎಸ್ಕೇಪ್ ಆಗುತ್ತಿದ್ದ 67 ವರ್ಷದ ಅಜ್ಜನನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ತಮಿಳುನಾಡು ರಾಜ್ಯದ ತೂತುಕುಡಿಯ ಬಿಮ್ಸೆಂಟ್ ಜಾನ್(67) ಬಂಧಿತ ವ್ಯಕ್ತಿ. ಆರೋಪಿ ಡಿಸೆಂಬರ್ 7 ರಂದು ಮಣಿಪಾಲ ಕಂಟ್ರಿ ಇನ್ ಹೊಟೇಲ್ನಲ್ಲಿ ರೂಮ್ ಪಡೆದುಕೊಂಡಿದ್ದ. ಮುಂಗಡ ಹಣವನ್ನು ಡಿಸೆಂಬರ್ 9ರಂದು ಕೊಡುವುದಾಗಿ ಹೇಳಿದ್ದ. ಬಳಿಕ ಡಿಸೆಂಬರ್ 12ರಂದು ರೂಮ್ ಚೆಕ್ಔಟ್ ಮಾಡುತ್ತೇನೆ, ಅಂದೇ ಒಟ್ಟು ಹಣವನ್ನೂ ಕೊಡುತ್ತೇನೆ ಎಂದು ಹೊಟೇಲ್ ಮ್ಯಾನೇಜರ್ನ್ನು ನಂಬಿಸಿದ್ದ. ಹೊಟೆಲ್ನಲ್ಲಿಯೇ ಊಟ ತಿಂಡಿ ಮಾಡಿ ಒಟ್ಟು 39,298 ರೂ. ಬಿಲ್ ಮಾಡಿದ್ದು, ಕೊನೆಗೆ ಹಣ ಕೊಡದೇ ಪರಾರಿಯಾಗಿದ್ದ.
ಈ ಬಗ್ಗೆ ಹೊಟೇಲ್ ಸಿಬಂದಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್, ಆರೋಪಿ ಜೋನ್ ನನ್ನು ಮಣಿಪಾಲದಲ್ಲೇ ಬಂಧಿಸಿದ್ದಾರೆ. ಆರೋಪಿ ದೆಹಲಿ, ಮಹಾರಾಷ್ಟ್ರದ ಥಾಣೆ, ಕೇರಳದ ಕೊಲ್ಲಂ ಸೇರಿದಂತೆ ಹಲವು ರಾಜ್ಯಗಳಲ್ಲಿ ವಂಚನೆ ಮಾಡಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸ್ಟಾರ್ ಹೊಟೇಲ್ಗಳಲ್ಲಿ ರೂಮ್ ಪಡೆದು ಸಾವಿರಾರು ರೂಪಾಯಿ ಬಿಲ್ ಮಾಡಿ, ಬಳಿಕ ಹಣ ಪಾವತಿಸದೆ ಪರಾರಿಯಾಗಿ ವಂಚಿಸುತ್ತಿದ್ದ. ಜಾನ್ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 49 ಪ್ರಕರಣಗಳು ದಾಖಲಾಗಿವೆ. ಆರೋಪಿಗೆ ಉಡುಪಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
A fraudster from Tamil Nadu has been arrested for deceiving a private five-star hotel in Manipal with a fake conference meeting. The Manipal police successfully arrested the accused, who has been targeting prestigious five-star hotels across the country and defrauding them.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm