ಬ್ರೇಕಿಂಗ್ ನ್ಯೂಸ್
11-12-24 10:39 pm Udupi Correspondent ಕ್ರೈಂ
ಉಡುಪಿ, ಡಿ.11: ದೇಶದ ವಿವಿಧೆಡೆ ಸ್ಟಾರ್ ಹೊಟೇಲ್ ಗಳಲ್ಲಿ ಕೊಠಡಿ ಪಡೆದು ಊಟ ತಿಂಡಿ ತಿಂದು ಸಾವಿರಾರು ರೂ. ಬಿಲ್ ಮಾಡಿ ಬಳಿಕ ಎಸ್ಕೇಪ್ ಆಗುತ್ತಿದ್ದ 67 ವರ್ಷದ ಅಜ್ಜನನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ತಮಿಳುನಾಡು ರಾಜ್ಯದ ತೂತುಕುಡಿಯ ಬಿಮ್ಸೆಂಟ್ ಜಾನ್(67) ಬಂಧಿತ ವ್ಯಕ್ತಿ. ಆರೋಪಿ ಡಿಸೆಂಬರ್ 7 ರಂದು ಮಣಿಪಾಲ ಕಂಟ್ರಿ ಇನ್ ಹೊಟೇಲ್ನಲ್ಲಿ ರೂಮ್ ಪಡೆದುಕೊಂಡಿದ್ದ. ಮುಂಗಡ ಹಣವನ್ನು ಡಿಸೆಂಬರ್ 9ರಂದು ಕೊಡುವುದಾಗಿ ಹೇಳಿದ್ದ. ಬಳಿಕ ಡಿಸೆಂಬರ್ 12ರಂದು ರೂಮ್ ಚೆಕ್ಔಟ್ ಮಾಡುತ್ತೇನೆ, ಅಂದೇ ಒಟ್ಟು ಹಣವನ್ನೂ ಕೊಡುತ್ತೇನೆ ಎಂದು ಹೊಟೇಲ್ ಮ್ಯಾನೇಜರ್ನ್ನು ನಂಬಿಸಿದ್ದ. ಹೊಟೆಲ್ನಲ್ಲಿಯೇ ಊಟ ತಿಂಡಿ ಮಾಡಿ ಒಟ್ಟು 39,298 ರೂ. ಬಿಲ್ ಮಾಡಿದ್ದು, ಕೊನೆಗೆ ಹಣ ಕೊಡದೇ ಪರಾರಿಯಾಗಿದ್ದ.
ಈ ಬಗ್ಗೆ ಹೊಟೇಲ್ ಸಿಬಂದಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್, ಆರೋಪಿ ಜೋನ್ ನನ್ನು ಮಣಿಪಾಲದಲ್ಲೇ ಬಂಧಿಸಿದ್ದಾರೆ. ಆರೋಪಿ ದೆಹಲಿ, ಮಹಾರಾಷ್ಟ್ರದ ಥಾಣೆ, ಕೇರಳದ ಕೊಲ್ಲಂ ಸೇರಿದಂತೆ ಹಲವು ರಾಜ್ಯಗಳಲ್ಲಿ ವಂಚನೆ ಮಾಡಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸ್ಟಾರ್ ಹೊಟೇಲ್ಗಳಲ್ಲಿ ರೂಮ್ ಪಡೆದು ಸಾವಿರಾರು ರೂಪಾಯಿ ಬಿಲ್ ಮಾಡಿ, ಬಳಿಕ ಹಣ ಪಾವತಿಸದೆ ಪರಾರಿಯಾಗಿ ವಂಚಿಸುತ್ತಿದ್ದ. ಜಾನ್ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 49 ಪ್ರಕರಣಗಳು ದಾಖಲಾಗಿವೆ. ಆರೋಪಿಗೆ ಉಡುಪಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
A fraudster from Tamil Nadu has been arrested for deceiving a private five-star hotel in Manipal with a fake conference meeting. The Manipal police successfully arrested the accused, who has been targeting prestigious five-star hotels across the country and defrauding them.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm