ಬ್ರೇಕಿಂಗ್ ನ್ಯೂಸ್
18-12-24 11:15 am Mangalore Correspondent ಕ್ರೈಂ
ಮಂಗಳೂರು, ಡಿ.18: ಗೋವಾ ರಾಜ್ಯದಿಂದ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ಪೂರೈಸುತ್ತಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆಹಚ್ಚಿ 30 ಗ್ರಾಂ ಕೋಕೆನ್ ವಶಪಡಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
2024ರ ಮಾರ್ಚ್ ತಿಂಗಳಲ್ಲಿ ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ನಿಷೇಧಿತ ಕೋಕೆನ್ ಅನ್ನು ಖರೀದಿಸಿ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂಬ್ಲಮೊಗರು ನಿವಾಸಿಗಳಾದ ಸದಕತ್ ಯು @ ಶಾನ್ ನವಾಜ್, ಮಹಮ್ಮದ್ ಅಶ್ಫಕ್ @ ಅಶ್ಫಾ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಅವರ ವಶದಿಂದ 34 ಗ್ರಾಂ ಕೋಕೆನ್ ಹಾಗೂ ಇತರ ಒಟ್ಟು ರೂ. 2,72,000/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಆರೋಪಿಗಳಿಗೆ ಕೋಕೇನ್ ನೀಡಿದ ಗೋವಾದ ಡ್ರಗ್ ಪೆಡ್ಲರ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಗೋವಾ ರಾಜ್ಯದ ಉತ್ತರ ಗೋವಾದ ಕಾಲನ್ ಗೂಟ್ ಎಂಬಲ್ಲಿ ನೆಲೆಸಿದ್ದ ನೈಜೇರಿಯಾ ದೇಶದ ಪ್ರಜೆ ಮೈಕಲ್ ಒಕಫಾರ್ ಒಡಿಕ್ಪೋ (44) ಎಂಬಾತನನ್ನು ವಶಕ್ಕೆ ಪಡೆದು ಆತನ ವಶದಿಂದ 30 ಗ್ರಾಂ ಕೋಕೇನ್, ಸಾಗಾಟಕ್ಕೆ ಉಪಯೋಗಿಸಿದ ಬೊಲೆನೋ ಕಾರು, ಮೊಬೈಲ್ ಫೋನ್ ಗಳು-2, ನಗದು ಹಣ ರೂ. 4500/- ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 11,25,000/- ಆಗಿರುತ್ತದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಸೆನ್ ಕ್ರೈಂ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಆರೋಪಿ ನೈಜೇರಿಯಾ ದೇಶದವನಾಗಿದ್ದು, 2012ರಲ್ಲಿ ಭಾರತಕ್ಕೆ ವ್ಯಾಪಾರದ ವೀಸಾದಲ್ಲಿ ಬಂದು ಮುಂಬೈಯಲ್ಲಿ ಸುಮಾರು ಒಂದೂವರೆ ವರ್ಷ ವಾಸ್ತವ್ಯವಿದ್ದು ನಂತರ ಗೋವಾಕ್ಕೆ ಬಂದು ಗೋವಾದಲ್ಲಿ ವಾಸ್ತವ್ಯವಿದ್ದು ಮಾದಕ ವಸ್ತು ಮಾರಾಟ ಮಾಡುತ್ತಿರುವುದಾಗಿದೆ. ಈತನ ವಿರುದ್ದ ಈಗಾಗಲೇ ಗೋವಾದಲ್ಲಿ ಒಟ್ಟು 3 ಮಾದಕ ವಸ್ತು ಮಾರಾಟ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
The Mangaluru City Crime Branch (CCB) police have successfully arrested a Nigerian national who was supplying banned narcotic substances, particularly cocaine, to Mangaluru. The accused, Michael Okafar Odikpo ,who resides in Goa, was apprehended with 30 grams of cocaine.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm