ಬ್ರೇಕಿಂಗ್ ನ್ಯೂಸ್
18-12-24 11:15 am Mangalore Correspondent ಕ್ರೈಂ
ಮಂಗಳೂರು, ಡಿ.18: ಗೋವಾ ರಾಜ್ಯದಿಂದ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ಪೂರೈಸುತ್ತಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆಹಚ್ಚಿ 30 ಗ್ರಾಂ ಕೋಕೆನ್ ವಶಪಡಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
2024ರ ಮಾರ್ಚ್ ತಿಂಗಳಲ್ಲಿ ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ನಿಷೇಧಿತ ಕೋಕೆನ್ ಅನ್ನು ಖರೀದಿಸಿ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂಬ್ಲಮೊಗರು ನಿವಾಸಿಗಳಾದ ಸದಕತ್ ಯು @ ಶಾನ್ ನವಾಜ್, ಮಹಮ್ಮದ್ ಅಶ್ಫಕ್ @ ಅಶ್ಫಾ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಅವರ ವಶದಿಂದ 34 ಗ್ರಾಂ ಕೋಕೆನ್ ಹಾಗೂ ಇತರ ಒಟ್ಟು ರೂ. 2,72,000/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಆರೋಪಿಗಳಿಗೆ ಕೋಕೇನ್ ನೀಡಿದ ಗೋವಾದ ಡ್ರಗ್ ಪೆಡ್ಲರ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಗೋವಾ ರಾಜ್ಯದ ಉತ್ತರ ಗೋವಾದ ಕಾಲನ್ ಗೂಟ್ ಎಂಬಲ್ಲಿ ನೆಲೆಸಿದ್ದ ನೈಜೇರಿಯಾ ದೇಶದ ಪ್ರಜೆ ಮೈಕಲ್ ಒಕಫಾರ್ ಒಡಿಕ್ಪೋ (44) ಎಂಬಾತನನ್ನು ವಶಕ್ಕೆ ಪಡೆದು ಆತನ ವಶದಿಂದ 30 ಗ್ರಾಂ ಕೋಕೇನ್, ಸಾಗಾಟಕ್ಕೆ ಉಪಯೋಗಿಸಿದ ಬೊಲೆನೋ ಕಾರು, ಮೊಬೈಲ್ ಫೋನ್ ಗಳು-2, ನಗದು ಹಣ ರೂ. 4500/- ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 11,25,000/- ಆಗಿರುತ್ತದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಸೆನ್ ಕ್ರೈಂ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಆರೋಪಿ ನೈಜೇರಿಯಾ ದೇಶದವನಾಗಿದ್ದು, 2012ರಲ್ಲಿ ಭಾರತಕ್ಕೆ ವ್ಯಾಪಾರದ ವೀಸಾದಲ್ಲಿ ಬಂದು ಮುಂಬೈಯಲ್ಲಿ ಸುಮಾರು ಒಂದೂವರೆ ವರ್ಷ ವಾಸ್ತವ್ಯವಿದ್ದು ನಂತರ ಗೋವಾಕ್ಕೆ ಬಂದು ಗೋವಾದಲ್ಲಿ ವಾಸ್ತವ್ಯವಿದ್ದು ಮಾದಕ ವಸ್ತು ಮಾರಾಟ ಮಾಡುತ್ತಿರುವುದಾಗಿದೆ. ಈತನ ವಿರುದ್ದ ಈಗಾಗಲೇ ಗೋವಾದಲ್ಲಿ ಒಟ್ಟು 3 ಮಾದಕ ವಸ್ತು ಮಾರಾಟ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
The Mangaluru City Crime Branch (CCB) police have successfully arrested a Nigerian national who was supplying banned narcotic substances, particularly cocaine, to Mangaluru. The accused, Michael Okafar Odikpo ,who resides in Goa, was apprehended with 30 grams of cocaine.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm