ಬ್ರೇಕಿಂಗ್ ನ್ಯೂಸ್
18-12-24 09:23 pm Bangalore Correspondent ಕ್ರೈಂ
ಬೆಂಗಳೂರು, ಡಿ.18: ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ರಾಕೆಟನ್ನು ಪತ್ತೆ ಮಾಡಿರುವ ಬೆಂಗಳೂರು ಸಿಸಿಬಿ ಪೊಲೀಸರು ವಿದೇಶಿ ಮಹಿಳೆ ಸಹಿತ ಬರೋಬ್ಬರಿ 24 ಕೋಟಿ ಮೌಲ್ಯದ 12 ಕೇಜಿ ಎಂಡಿಎಂಎ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈವರೆಗೆ ರಾಜ್ಯದಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಅತಿದೊಡ್ಡ ಡ್ರಗ್ ರಾಕೆಟ್ ಇದಾಗಿದೆ.
ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಸಿ ಪಾಳ್ಯದಲ್ಲಿ ಮಹಿಳೆ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಡಿ.13ರಂದು ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಹತ್ವದ ಕಾರ್ಯಾಚರಣೆಯಲ್ಲಿ 12 ಕೇಜಿಯಷ್ಟು ತೂಕದ ಬಿಳಿ ಮತ್ತು ಹಳದಿ ಬಣ್ಣದ ಎಂಡಿಎಂಎ ಕ್ರಿಸ್ಟಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ವಿದೇಶಿ ಮಹಿಳೆ ಟಿಸಿ ಪಾಳ್ಯದಲ್ಲಿ ಆಫ್ರಿಕಾ ಮೂಲದವರಿಗೆಂದೇ ಆಹಾರ ಸಾಮಗ್ರಿಗಳನ್ನು ವಿತರಿಸುವ ಅಂಗಡಿಯೊಂದನ್ನು ನಡೆಸುತ್ತಿದ್ದಾಳೆ ಎಂಬ ಖಚಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಅಂಗಡಿಯಲ್ಲಿದ್ದುಕೊಂಡೇ ಆಫ್ರಿಕನ್ನರಿಗೆ ಮತ್ತು ಇತರ ಗ್ರಾಹಕರಿಗೆ ಡ್ರಗ್ಸ್ ಅನ್ನೂ ಪೂರೈಕೆ ಮಾಡುತ್ತಿದ್ದಳು. ಈಕೆಗೆ ಸಪ್ಲೈ ಮಾಡುತ್ತಿದ್ದವರನ್ನು ಸರ್ಚ್ ಮಾಡುತ್ತಿದ್ದೇವೆ ಎಂದು ಬೆಂಗಳೂರು ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ. ಮಾಹಿತಿ ಪ್ರಕಾರ, ಮುಂಬೈನಿಂದ ಸೋಪ್ ಪ್ಯಾಕೆಟ್, ಒಣ ಮೀನಿನ ಪ್ಯಾಕೆಟ್ ಮೂಲಕ ಡ್ರಗ್ಸ್ ಅನ್ನು ಬೆಂಗಳೂರಿಗೆ ಪೂರೈಸುತ್ತಿದ್ದರು. ಅಲ್ಲದೆ, ಈ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ಸ್ ಮತ್ತು ಇತರರಿಗೆ ಹೆಚ್ಚಿನ ಬೆಲೆಗೆ ಮಾರುತ್ತಿದ್ದರು.
12 ಕೇಜಿ ಎಂಡಿಎಂಎ ಜೊತೆಗೆ ಮೊಬೈಲ್ ಫೋನ್, 70 ಏರ್ಟೆಲ್ ಸಿಮ್ ಅನ್ನು ವಶಕ್ಕೆ ಪಡೆಯಲಾಗಿದೆ. ಈಕೆಗೆ ಮುಂಬೈನಲ್ಲಿ ನೆಲೆಸಿರುವ ಒಬ್ಬಾಕೆ ಮಹಿಳೆಯೇ ಡ್ರಗ್ಸ್ ಪೂರೈಸುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಕ್ರಮವಾಗಿ ಹಣ ಮಾಡುವುದಕ್ಕಾಗಿಯೇ ಈ ಡ್ರಗ್ಸ್ ರಾಕೆಟಲ್ಲಿ ತೊಡಗಿಸಿಕೊಂಡಿದ್ದಾಗಿ ಬಂಧಿತ ಮಹಿಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಅಲ್ಲದೆ, ಈಕೆ ಬಿಸಿನೆಸ್ ವೀಸಾದಲ್ಲಿ ಐದು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದು, ಅದರ ಅವಧಿ ಮುಗಿದರೂ ಅಕ್ರಮವಾಗಿ ಉಳಿದುಕೊಂಡಿದ್ದಳು.
Bengaluru, A foreign national was arrested for allegedly running a drug racket and 12 kg banned MDMA crystals worth an estimated ₹24 crore were seized from her possession here, police said on Tuesday.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm