ಬ್ರೇಕಿಂಗ್ ನ್ಯೂಸ್
18-12-24 09:23 pm Bangalore Correspondent ಕ್ರೈಂ
ಬೆಂಗಳೂರು, ಡಿ.18: ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ರಾಕೆಟನ್ನು ಪತ್ತೆ ಮಾಡಿರುವ ಬೆಂಗಳೂರು ಸಿಸಿಬಿ ಪೊಲೀಸರು ವಿದೇಶಿ ಮಹಿಳೆ ಸಹಿತ ಬರೋಬ್ಬರಿ 24 ಕೋಟಿ ಮೌಲ್ಯದ 12 ಕೇಜಿ ಎಂಡಿಎಂಎ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈವರೆಗೆ ರಾಜ್ಯದಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಅತಿದೊಡ್ಡ ಡ್ರಗ್ ರಾಕೆಟ್ ಇದಾಗಿದೆ.
ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಸಿ ಪಾಳ್ಯದಲ್ಲಿ ಮಹಿಳೆ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಡಿ.13ರಂದು ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಹತ್ವದ ಕಾರ್ಯಾಚರಣೆಯಲ್ಲಿ 12 ಕೇಜಿಯಷ್ಟು ತೂಕದ ಬಿಳಿ ಮತ್ತು ಹಳದಿ ಬಣ್ಣದ ಎಂಡಿಎಂಎ ಕ್ರಿಸ್ಟಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ವಿದೇಶಿ ಮಹಿಳೆ ಟಿಸಿ ಪಾಳ್ಯದಲ್ಲಿ ಆಫ್ರಿಕಾ ಮೂಲದವರಿಗೆಂದೇ ಆಹಾರ ಸಾಮಗ್ರಿಗಳನ್ನು ವಿತರಿಸುವ ಅಂಗಡಿಯೊಂದನ್ನು ನಡೆಸುತ್ತಿದ್ದಾಳೆ ಎಂಬ ಖಚಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಅಂಗಡಿಯಲ್ಲಿದ್ದುಕೊಂಡೇ ಆಫ್ರಿಕನ್ನರಿಗೆ ಮತ್ತು ಇತರ ಗ್ರಾಹಕರಿಗೆ ಡ್ರಗ್ಸ್ ಅನ್ನೂ ಪೂರೈಕೆ ಮಾಡುತ್ತಿದ್ದಳು. ಈಕೆಗೆ ಸಪ್ಲೈ ಮಾಡುತ್ತಿದ್ದವರನ್ನು ಸರ್ಚ್ ಮಾಡುತ್ತಿದ್ದೇವೆ ಎಂದು ಬೆಂಗಳೂರು ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ. ಮಾಹಿತಿ ಪ್ರಕಾರ, ಮುಂಬೈನಿಂದ ಸೋಪ್ ಪ್ಯಾಕೆಟ್, ಒಣ ಮೀನಿನ ಪ್ಯಾಕೆಟ್ ಮೂಲಕ ಡ್ರಗ್ಸ್ ಅನ್ನು ಬೆಂಗಳೂರಿಗೆ ಪೂರೈಸುತ್ತಿದ್ದರು. ಅಲ್ಲದೆ, ಈ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ಸ್ ಮತ್ತು ಇತರರಿಗೆ ಹೆಚ್ಚಿನ ಬೆಲೆಗೆ ಮಾರುತ್ತಿದ್ದರು.
12 ಕೇಜಿ ಎಂಡಿಎಂಎ ಜೊತೆಗೆ ಮೊಬೈಲ್ ಫೋನ್, 70 ಏರ್ಟೆಲ್ ಸಿಮ್ ಅನ್ನು ವಶಕ್ಕೆ ಪಡೆಯಲಾಗಿದೆ. ಈಕೆಗೆ ಮುಂಬೈನಲ್ಲಿ ನೆಲೆಸಿರುವ ಒಬ್ಬಾಕೆ ಮಹಿಳೆಯೇ ಡ್ರಗ್ಸ್ ಪೂರೈಸುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಕ್ರಮವಾಗಿ ಹಣ ಮಾಡುವುದಕ್ಕಾಗಿಯೇ ಈ ಡ್ರಗ್ಸ್ ರಾಕೆಟಲ್ಲಿ ತೊಡಗಿಸಿಕೊಂಡಿದ್ದಾಗಿ ಬಂಧಿತ ಮಹಿಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಅಲ್ಲದೆ, ಈಕೆ ಬಿಸಿನೆಸ್ ವೀಸಾದಲ್ಲಿ ಐದು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದು, ಅದರ ಅವಧಿ ಮುಗಿದರೂ ಅಕ್ರಮವಾಗಿ ಉಳಿದುಕೊಂಡಿದ್ದಳು.
Bengaluru, A foreign national was arrested for allegedly running a drug racket and 12 kg banned MDMA crystals worth an estimated ₹24 crore were seized from her possession here, police said on Tuesday.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm