ಬ್ರೇಕಿಂಗ್ ನ್ಯೂಸ್
22-12-24 04:44 pm Mangalore Correspondent ಕ್ರೈಂ
ಮಂಗಳೂರು, ಡಿ.21: ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಭಾರೀ ಲಾಭ ತೆಗೆಸಿಕೊಡುತ್ತೇವೆಂದು ವಾಟ್ಸಪ್ ಮೆಸೇಜ್ ಮಾಡಿ ಲಕ್ಷಾಂತರ ರೂಪಾಯಿ ಪಡೆದು ಯಾಮಾರಿಸುವುದು ನಡೆಯುತ್ತಲೇ ಇದೆ. ಸೈಬರ್ ವಂಚಕರು ವ್ಯವಸ್ಥಿತ ರೀತಿಯಲ್ಲಿ ಇಂತಹ ವಂಚನೆಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗೆ ಮಂಗಳೂರಿನ ವ್ಯಕ್ತಿಯೊಬ್ಬ 40 ಲಕ್ಷ ರೂ. ನಕಲಿ ಷೇರು ಮಾರುಕಟ್ಟೆಗೆ ಹೂಡಿಕೆ ಮಾಡಿ ಹಣ ಕಳಕೊಂಡಿದ್ದರು. ಪ್ರಕರಣ ಸಂಬಂಧಿಸಿ ಪೊಲೀಸರು ಬ್ಯಾಂಕ್ ಖಾತೆಯ ಬೆನ್ನತ್ತಿ ಕೇರಳದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕೇರಳದ ಕೋಯಿಕ್ಕೋಡ್ ನಲ್ಲಿ ಜಯಂತ್ ಪಿ. (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಖಾತೆಯನ್ನು ದೇಶಾದ್ಯಂತ ಹಲವಾರು ಸೈಬರ್ ವಂಚಕರು ಬಳಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಇದಕ್ಕಾಗಿ 90ಕ್ಕೂ ಹೆಚ್ಚು ಕಡೆ ದೂರುಗಳು ದಾಖಲಾಗಿವೆ. ಪೊಲೀಸರು ಹೇಳುವ ಪ್ರಕಾರ, ಸೈಬರ್ ವಂಚಕರು ಹಲವಾರು ಮಂದಿಯನ್ನು ನೆಟ್ವರ್ಕ್ ಆಗಿ ಬಳಸಿಕೊಳ್ಳುತ್ತಿದ್ದು, ಹಲವರ ಬ್ಯಾಂಕ್ ಖಾತೆಯನ್ನು ಕಮಿಷನ್ ಕೊಟ್ಟು ಬಳಸಿಕೊಳ್ಳುತ್ತಿದ್ದಾರೆ.
ಷೇರು ಮಾರುಕಟ್ಟೆ ಹೆಸರಲ್ಲಿ ಹಣ ರವಾನಿಸಲು ಇಂತಹ ಖಾತೆಗಳನ್ನು ಬಳಸಿಕೊಳ್ಳುತ್ತಿದ್ದು, ಅಲ್ಲಿಗೆ ಹಣ ಕ್ರೆಡಿಟ್ ಆದೊಡನೆ ಅದನ್ನು ಇನ್ನೊಂದು ಖಾತೆಗೆ ವರ್ಗಾಯಿಸಲು ಸೂಚಿಸುತ್ತಾರೆ. ಕಮಿಷನ್ ಆಸೆಗೆ ಬಿದ್ದು ಇಂತಹ ಅಕ್ರಮಗಳಿಗೆ ಅವಕಾಶ ಮಾಡಿಕೊಟ್ಟರೆ ಪೊಲೀಸ್ ಕೇಸು ಎದುರಿಸಬೇಕಾಗುತ್ತದೆ. ಮಂಗಳೂರಿನ ವ್ಯಕ್ತಿ ಐಐಎಫ್ಎಲ್ ಸೆಕ್ಯುರಿಟೀಸ್ ಎಂಬ ಸ್ಟಾಕ್ ಗ್ರೂಪ್ ನಲ್ಲಿ ಹಣ ಹೂಡಿಕೆಗೆ ಮುಂದಾಗಿದ್ದರು. ಈ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿ ಸೈಬರ್ ವಂಚಕರು ನೀಡಿದ್ದ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿದ್ದರು. ಆಮೂಲಕ ಹಂತ ಹಂತವಾಗಿ 40.64 ಲಕ್ಷ ರೂಪಾಯಿ ಹಣವನ್ನು ಕಳಕೊಂಡಿದ್ದರು.
ಆರೋಪಿ ಜಯಂತ್ ತನ್ನ ಬ್ಯಾಂಕ್ ಖಾತೆಯನ್ನು ಇಂತಹ ಸೈಬರ್ ಅಪರಾಧಗಳಿಗೆ ಬಳಸಿಕೊಂಡಿದ್ದು ತನಿಖೆಯಲ್ಲಿ ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಕೇರಳದಲ್ಲಿ ಬಂಧಿಸಿ ಅಲ್ಲಿಯೇ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ.
In the second case (Crime No. 02/2024), the accused defrauded the complainant of Rs 40,64,609 through a WhatsApp link titled "IIFL Securities" under the pretext of stock market investments.The investigation revealed that the accused, Jayant P (35), a resident of Pulakkal House, Kozhikode, Kerala, used his bank account for cybercrimes. Over 90 complaints across the country were linked to the same bank account. Jayant was arrested in Kerala, brought to Mangaluru, and presented before the court.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 12:08 pm
Mangalore Correspondent
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm