ಬ್ರೇಕಿಂಗ್ ನ್ಯೂಸ್
29-12-24 10:50 pm Mangalore Correspondent ಕ್ರೈಂ
ಮಂಗಳೂರು, ಡಿ.29: ನಕಲಿ ಷೇರು ಮಾರುಕಟ್ಟೆ ಜಾಲದಲ್ಲಿ ಮಂಗಳೂರಿನ ಕದ್ರಿ ಠಾಣೆ ವ್ಯಾಪ್ತಿಯ ಮತ್ತೊಬ್ಬ ಮಹಿಳೆ 8.75 ಲಕ್ಷ ಹಣ ಕಳಕೊಂಡಿದ್ದಾರೆ. ಷೇರು ಮೂಲಕ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಯೂಟ್ಯೂಬ್ ನಲ್ಲಿ ಬಂದ ಮಾಹಿತಿಯನ್ನು ಆಧರಿಸಿ ಮೊಬೈಲ್ ಪ್ಲೇ ಸ್ಟೋರ್ ನಲ್ಲಿ SMCTK App ಅನ್ನು ಗೂಗಲ್ ಪ್ಲೇ ಸ್ಟೋರಿನಿಂದ ಡೌನ್ಲೋಡ್ ಮಾಡಿದ್ದು, ಆಬಳಿಕ ತನ್ನ ಮೊಬೈಲ್ ವಿವರ ಮತ್ತು ಬ್ಯಾಂಕ್ ಖಾತೆ ನಮೂದಿಸಿದ್ದರು.
ಆನಂತರ ಮಹಿಳೆಯ ಮೊಬೈಲ್ ನಂಬರನ್ನು ಎಸ್ ಎಂಸಿ ಗ್ಲೋಬಲ್ ಸೆಕ್ಯುರಿಟೀಸ್, ಎಸ್ ಎಂಸಿ ಮಾರ್ಕೆಟ್ ವಾಚ್ ವಾಟ್ಸಪ್ ಗ್ರೂಪ್ ಗೆ ಸೇರಿಸಲಾಗಿತ್ತು. ಅದರಲ್ಲಿ ಗ್ರೂಪ್ ಅಡ್ಮಿನ್ ಆಗಿರುವ ಅಜಯ್ ಗಾರ್ಗ್ ಎಂಬಾತ ತನ್ನನ್ನು ಕಂಪನಿ ಸಿಇಓ ಎಂದು ಪರಿಚಯಿಸಿ ವಾಟ್ಸಪ್ ಕರೆ ಮಾಡಿದ್ದ. ಅಲ್ಲದೆ, ತಮ್ಮ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಸಿಗುವುದಾಗಿ ನಂಬಿಸಿದ್ದಾನೆ.
ಆನಂತರ ಖಾಸಗಿಯಾಗಿ ಚಾಟಿಂಗ್ ಮಾಡುತ್ತ ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದ. ಇದರಂತೆ, ಗೂಗಲ್ ಪ್ಲೇ ಸ್ಟೋರಿನಿಂದ ಡೌನ್ಲೋಡ್ ಮಾಡಿದ್ದ ಎಸ್ಎಂಸಿಟಿಕೆ ಆಪ್ ನಲ್ಲಿ ಹಣ ಹೂಡಿಕೆ ಮಾಡಲು ಮುಂದಾಗಿದ್ದು ಆತ ನೀಡಿರುವ ಬ್ಯಾಂಕ್ ಖಾತೆಗಳಿಗೆ ಹಣವನ್ನು ರವಾನಿಸಿದ್ದಾರೆ. ಎರಡು ಬ್ಯಾಂಕ್ ಖಾತೆಗಳಿಗೆ 8,75000 ರುಪಾಯಿ ಹಣವನ್ನು ಹಂತ ಹಂತವಾಗಿ ನೆಫ್ಟ್ ಮೂಲಕ ಹಾಕಿದ್ದರು. ಆಬಳಿಕ ಏಪ್ ಅನ್ನು ಗಮನಿಸಿದಾಗ ತನ್ನ ಹಣ ದುಪ್ಪಟ್ಟು ಆಗಿರುವುದು ಕಂಡುಬಂದಿತ್ತು. ಅಲ್ಲದೆ, ಸ್ಪಷ್ಟವಾಗಿ 16,69,229 ರೂ. ಹಣ ಇರುವುದಾಗಿ ತೋರಿಸಿತ್ತು. ಈ ಹಣವನ್ನು ಹಿಂತಿರುಗಿ ಪಡೆಯಲು ಸಿಇಓ ಅಜಯ್ ಗಾರ್ಗ್ ಅವರನ್ನು ಮಹಿಳೆ ಸಂಪರ್ಕಿಸಿದ್ದಾರೆ.
ಆದರೆ ಲಾಭದ ಹಣವನ್ನು ಪಡೆಯಲು 1,97,307 ರೂ. ಹಣವನ್ನು ಟ್ಯಾಕ್ಸ್ ರೂಪದಲ್ಲಿ ಕಟ್ಟಬೇಕಾಗುತ್ತದೆ. ಆ ಹಣವನ್ನು ಕಟ್ಟಿದರೆ ಮಾತ್ರ ಲಾಭದ ಹಣ ಸಿಗುತ್ತದೆ ಎಂದು ಆತ ಹೇಳಿದ್ದಾನೆ. ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Mangalore kadri Woman looses 8.75 lakhs in fake stock market after watching fake youtube video on stock market. A case has been registered at the CEN police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm