ಬ್ರೇಕಿಂಗ್ ನ್ಯೂಸ್
31-12-24 11:32 am Bangalore Correspondent ಕ್ರೈಂ
ಬೆಂಗಳೂರು, ಡಿ 31: ಕೆಎಎಸ್, ಪಿಡಿಒ, ಪಿಎಸ್ಐ ಸೇರಿ ಸರ್ಕಾರ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸ್ ಮಾಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಪಡೆದು ವಂಚಿಸುತ್ತಿದ್ದ ರೈಲ್ವೆ ಅಧಿಕಾರಿ ಯನ್ನ ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಯನಗರದ ಪಟ್ಟೇ ಗಾರಪಾಳ್ಯದ ಗೋವಿಂದ ರಾಜು (51) ಬಂಧಿತ. ಈತ ರೈಲ್ವೆ ಚೀಫ್ ಟಿಕೆಟ್ ಇನ್ಸ್ಪೆಕ್ಟರ್ ಆಗಿದ್ದಾನೆ. ಇತ್ತೀಚೆಗೆ ಉದ್ಯೋಗಾಂಕ್ಷಿಯೊಬ್ಬರಿಗೆ ಸ್ಪರ್ಧಾತ್ಮಕ ಪರೀಕ್ಷೆ ಪಾಸು ಮಾಡಿಸುವುದಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಸುಮಾರು 46 ಮಂದಿಗೆ ವಂಚಿಸಿದ್ದು, 1 ಕೋಟಿ ರೂ. ವಸೂಲಿ ಮಾಡಿರುವುದು ತಿಳಿದು ಬಂದಿದೆ.
ನನಗೆ ಸರ್ಕಾರದ ಮಟ್ಟದಲ್ಲಿ ಹಲವು ಅಧಿಕಾರಿಗಳ ಪರಿಚಿತರಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸು ಮಾಡಿಸುವುದಾಗಿ ನಂಬಿಸಿ, ಉದ್ಯೋಕಾಂಕ್ಷಿಗಳಿಂದ ಲಕ್ಷಾಂತರ ರೂ. ಪಡೆದು ಬಳಿಕ ವಂಚಿಸುತ್ತಿದ್ದ. ಆತನ ವಿಚಾರಣೆಯಲ್ಲಿ ಐದು ವರ್ಷದ ಹಿಂದೆ ಸಿಸಿಬಿ ಪೊಲೀಸರು ವಂಚನೆ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
46 ಮಂದಿಯ ಹೆಸರು ಪತ್ತೆ:
ತಾನು ಪರೀಕ್ಷೆಯಲ್ಲಿ ಪಾಸ್ ಮಾಡಿಸಿ ಹುದ್ದೆ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಪರೀಕ್ಷಾರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಪಿಡಿಒ ಹುದ್ದೆಗೆ 25 ಲಕ್ಷ ರೂ. ಹಾಗೂ ಕೆ.ಎ.ಎಸ್ ಪ್ರಿಲಿಮ್ಸ್ ಪರೀಕ್ಷೆಗೆ 50 ಲಕ್ಷ ರೂ. ನೀಡುವಂತೆ ಒಪ್ಪಂದ ಮಾಡಿಕೊಳ್ಳುತ್ತಿದ್ದ. ಪರೀಕ್ಷೆಯಲ್ಲಿ ತಮಗೆ ಖಚಿತವಾಗಿ ಗೊತ್ತಿರುವ ಪ್ರಶ್ನೆಗಳಿಗೆ ಓಎಂಆರ್ ಶೀಟ್ನಲ್ಲಿ ಉತ್ತರ ತುಂಬಿಸಿ ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರವನ್ನು ಖಾಲಿ ಬಿಟ್ಟು ಬರುವಂತೆ ತಿಳಿಸಿ, ನಂತರ ಓಎಂಆರ್ ಶೀಟ್ನಲ್ಲಿ ಸರಿಯಾದ ಉತ್ತರವನ್ನು ತುಂಬಿಸಿ ಪಾಸ್ ಮಾಡಿಸುತ್ತೇನೆ ಎಂದು ನಂಬಿಸುತ್ತಿದ್ದ. ಅಲ್ಲದೆ, ಅದಕ್ಕೆ ಗ್ಯಾರಂಟಿಯಾಗಿ ಅಭ್ಯರ್ಥಿಗಳಿಂದ 10ನೇ ತರಗತಿ ಮತ್ತು ಪದವಿಗೆ ಸಂಬಂಧಿಸಿದ ಪ್ರಮಾಣಪತ್ರಗಳನ್ನು, ಪರೀಕ್ಷಾ ಪ್ರವೇಶ ಪತ್ರಗಳನ್ನು ಪಡೆದುಕೊಂಡು, ಸಹಿ ಹಾಕಿರುವ ಖಾಲಿ ಚೆಕ್ಗಳನ್ನು ಪಡೆದುಕೊಂಡಿದ್ದಾನೆ. ಸದ್ಯ ಅವುಗಳನ್ನು ಮಧ್ಯವರ್ತಿಗಳಿಗೆ ನೀಡಿದ್ದಾಗಿ ತಿಳಿಸಿದ್ದಾನೆ. ನಂತರ ಈತನ ವಶದಲ್ಲಿದ್ದ 4 ಮೊಬೈಲ್ಗಳನ್ನು ಪರಿಶೀಲಿಸಿದಾಗ 46 ಜನಗಳ ಹೆಸರು ಮತ್ತು ಅದರ ಮುಂದೆ ಚೆಕ್ ಮತ್ತು ಡಾಕ್ಯೂಮೆಂಟ್ ಎಂದು ನಮೂದಿಸಿರುವ ಫೋಟೋಗಳು ಪತ್ತೆಯಾಗಿವೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿ 1 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿರುವುದು ಗೊತ್ತಾಗಿದೆ.
The Bangalore police Monday said they have arrested a senior railway officer for allegedly cheating government job aspirants. The accused, Govindaraju, 49, is a chief ticket inspector with South Western Railway (SWR) and resides in Nagarabhavi in Bengaluru.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm