ಬ್ರೇಕಿಂಗ್ ನ್ಯೂಸ್
02-01-25 11:00 pm HK News Desk ಕ್ರೈಂ
ಬೆಳಗಾವಿ, ಜ.2: ಕುಡಿತಕ್ಕಾಗಿ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಗಂಡನನ್ನು ಪತ್ನಿಯೇ ಎರಡು ತುಂಡಾಗಿ ಕತ್ತರಿಸಿ ಭೀಕರ ರೀತಿಯಲ್ಲಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಶ್ರೀಮಂತ ಇಟ್ನಾಳೆ (50) ಕೊಲೆಯಾದ ದುರ್ದೈವಿ.
2024ರ ಡಿಸೆಂಬರ್ 10 ರಂದು ಘಟನೆ ನಡೆದಿದ್ದು ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಆರೋಪಿತ ಮಹಿಳೆ ಸಾವಿತ್ರಿ ಇಟ್ನಾಳೆ(30) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆಯಾದ ವ್ಯಕ್ತಿ ಕುಡಿತದ ಚಟಕ್ಕೆ ಒಳಗಾಗಿದ್ದ. ಮನೆಯಲ್ಲಿ ಕುಡಿತಕ್ಕಾಗಿ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿ ಸಾವಿತ್ರಿಯನ್ನು ನಿವೇಶನ ಮಾರಿ ಹಣ ಕೊಡುವಂತೆ ಶ್ರೀಮಂತ್ ಪೀಡಿಸುತ್ತಿದ್ದ. ಗಂಡನ ಕಿರುಕುಳ ತಾಳಲಾರದೇ ಮನೆಯ ಎದುರು ಕಟ್ಟೆಯ ಮೇಲೆ ಮಲಗಿದ್ದ ಶ್ರೀಮಂತನ ಕುತ್ತಿಗೆ ಹಿಸುಕಿ, ಪ್ರಜ್ಞೆ ತಪ್ಪಿದ ನಂತರ ಅವನ ದೇಹವನ್ನು ಹರಿತ ಆಯುಧದಿಂದ ಎರಡು ತುಂಡುಗಳನ್ನಾಗಿಸಿ ಕೊಲೆ ಮಾಡಿರುತ್ತಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವವನ್ನು ಒಬ್ಬಳಿಗೆ ಹೊರಗೆ ಸಾಗಿಸಲು ಆಗಲ್ಲ ಅಂತ ದೇಹವನ್ನ ತುಂಡರಿಸಿ ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿ ಕೃಷಿ ಜಮೀನಿಗೆ ಒಯ್ದು ಎಸೆದಿದ್ದಾಳೆ. ಕೆಲವು ದಿನಗಳ ಬಳಿಕ ಪಕ್ಕದ ತೋಟದವರು ಶವ ನೋಡಿ ಪೊಲೀಸ್ ಠಾಣೆಗೆ ತಿಳಿಸಿದ್ದರು. ಹಲವು ಆಯಾಮಗಳಲ್ಲಿ ತನಿಖೆ ನಡೆಸಿದರೂ, ಆರೋಪಿ ಯಾರು ಎಂಬುದು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಡಿ.12 ರಂದು ಪ್ರಕರಣ ದಾಖಲಾಗಿತ್ತು. ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣಕ್ಕೆ ಗಂಡನನ್ನೇ ಹೆಂಡತಿ ಕೊಲೆ ಮಾಡಿದ್ದು ಈಗ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A woman allegedly killed her husband following suspicion that he was planning to sexually assault their daughter, in Umrani village near Chikkodi in Belagavi district on Wednesday (January 1, 2025) night. Savitri Itnal (25) allegedly hacked Srimant Itnal (30) to death at their house. She used a rock to smash his head.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm