ಬ್ರೇಕಿಂಗ್ ನ್ಯೂಸ್
02-01-25 11:00 pm HK News Desk ಕ್ರೈಂ
ಬೆಳಗಾವಿ, ಜ.2: ಕುಡಿತಕ್ಕಾಗಿ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಗಂಡನನ್ನು ಪತ್ನಿಯೇ ಎರಡು ತುಂಡಾಗಿ ಕತ್ತರಿಸಿ ಭೀಕರ ರೀತಿಯಲ್ಲಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಶ್ರೀಮಂತ ಇಟ್ನಾಳೆ (50) ಕೊಲೆಯಾದ ದುರ್ದೈವಿ.
2024ರ ಡಿಸೆಂಬರ್ 10 ರಂದು ಘಟನೆ ನಡೆದಿದ್ದು ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಆರೋಪಿತ ಮಹಿಳೆ ಸಾವಿತ್ರಿ ಇಟ್ನಾಳೆ(30) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆಯಾದ ವ್ಯಕ್ತಿ ಕುಡಿತದ ಚಟಕ್ಕೆ ಒಳಗಾಗಿದ್ದ. ಮನೆಯಲ್ಲಿ ಕುಡಿತಕ್ಕಾಗಿ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿ ಸಾವಿತ್ರಿಯನ್ನು ನಿವೇಶನ ಮಾರಿ ಹಣ ಕೊಡುವಂತೆ ಶ್ರೀಮಂತ್ ಪೀಡಿಸುತ್ತಿದ್ದ. ಗಂಡನ ಕಿರುಕುಳ ತಾಳಲಾರದೇ ಮನೆಯ ಎದುರು ಕಟ್ಟೆಯ ಮೇಲೆ ಮಲಗಿದ್ದ ಶ್ರೀಮಂತನ ಕುತ್ತಿಗೆ ಹಿಸುಕಿ, ಪ್ರಜ್ಞೆ ತಪ್ಪಿದ ನಂತರ ಅವನ ದೇಹವನ್ನು ಹರಿತ ಆಯುಧದಿಂದ ಎರಡು ತುಂಡುಗಳನ್ನಾಗಿಸಿ ಕೊಲೆ ಮಾಡಿರುತ್ತಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವವನ್ನು ಒಬ್ಬಳಿಗೆ ಹೊರಗೆ ಸಾಗಿಸಲು ಆಗಲ್ಲ ಅಂತ ದೇಹವನ್ನ ತುಂಡರಿಸಿ ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿ ಕೃಷಿ ಜಮೀನಿಗೆ ಒಯ್ದು ಎಸೆದಿದ್ದಾಳೆ. ಕೆಲವು ದಿನಗಳ ಬಳಿಕ ಪಕ್ಕದ ತೋಟದವರು ಶವ ನೋಡಿ ಪೊಲೀಸ್ ಠಾಣೆಗೆ ತಿಳಿಸಿದ್ದರು. ಹಲವು ಆಯಾಮಗಳಲ್ಲಿ ತನಿಖೆ ನಡೆಸಿದರೂ, ಆರೋಪಿ ಯಾರು ಎಂಬುದು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಡಿ.12 ರಂದು ಪ್ರಕರಣ ದಾಖಲಾಗಿತ್ತು. ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣಕ್ಕೆ ಗಂಡನನ್ನೇ ಹೆಂಡತಿ ಕೊಲೆ ಮಾಡಿದ್ದು ಈಗ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A woman allegedly killed her husband following suspicion that he was planning to sexually assault their daughter, in Umrani village near Chikkodi in Belagavi district on Wednesday (January 1, 2025) night. Savitri Itnal (25) allegedly hacked Srimant Itnal (30) to death at their house. She used a rock to smash his head.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm