ಬ್ರೇಕಿಂಗ್ ನ್ಯೂಸ್
03-01-25 11:02 pm Bangalore Correspondent ಕ್ರೈಂ
ಬೆಂಗಳೂರು, ಜ.3: ಜಮೀನು ವ್ಯಾಜ್ಯದ ಕುರಿತು ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆಯ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಮಧುಗಿರಿ ಪೊಲೀಸರು ಬಂಧಿಸಿದ್ದಾರೆ.
ಜಮೀನು ವ್ಯಾಜ್ಯಕ್ಕೆ ಸಂಬಂದಿಸಿದಂತೆ ದೂರು ಕೊಡಲು ಬಂದ ಮಹಿಳೆಯನ್ನು ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ತನ್ನ ಕಚೇರಿಯಲ್ಲೇ ಕಾಮತೃಷೆಗೆ ಬಳಸಿಕೊಂಡಿದ್ದ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದರು.
ಇದರ ಬೆನ್ನಲ್ಲೇ ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್ಐಆರ್ ದಾಖಲಿಸಿಕೊಂಡ ಮಧುಗಿರಿ ಪೊಲೀಸರು, ಡಿವೈಎಸ್ಪಿಯನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಮಹಿಳೆಯನ್ನು ಪುಸಲಾಯಿಸಿ ಕಾಮತೃಷೆ ತೀರಿಸಿಕೊಂಡಿದ್ದ !
ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ಜಮೀನಿನ ಕುರಿತಾಗಿ ವ್ಯಾಜ್ಯ ಉಂಟಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ದೂರು ಹೇಳಿಕೊಂಡಿದ್ದರು. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದ ಡಿವೈಎಸ್ಪಿ ರಾಮಚಂದ್ರಪ್ಪ, ನಾವು ವಿಚಾರಣೆಗೆ ಕರೆದಾಗ ಬರಬೇಕು ಎಂದಿದ್ದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಲು ಡಿವೈಎಸ್ ಪಿ ಕಚೇರಿಗೆ ಬರುವಂತೆ ತಿಳಿಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್ಪಿ ರಾಮಚಂದ್ರಪ್ಪ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ಮಹಿಳೆಯನ್ನು ಡಿವೈಎಸ್ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾನೆ. ಈ ದೃಶ್ಯವನ್ನು ಯಾರೋ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸಪ್ಪನ ಕ್ರೌರ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
Madhugiri DySP Ramachandrappa suspended and arrested after Sexual video with women inside office goes viral. In a shocking incident in Karnataka, a woman was allegedly molested by a police official at a police station in Madhugiri. A video of the alleged sexual harassment has also surfaced online. It is alleged that Ramachandrappa, Deputy Superintendent of Police (DySP) of Madhugiri division, behaved inappropriately with the woman who had arrived at the police station to file a land dispute complaint..
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm