ಬ್ರೇಕಿಂಗ್ ನ್ಯೂಸ್
07-01-25 03:50 pm Mangalore Correspondent ಕ್ರೈಂ
ಮಂಗಳೂರು, ಜ 07: ಸ್ನಾನ ಮಾಡುತ್ತಿದ್ದ ಅಪ್ರಾಪ್ತೆಯ ವಿಡಿಯೋ ಚಿತ್ರೀಕರಣ ಮಾಡಿದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ಸೊ) ಎಫ್ಟಿಎಸ್ಸಿ-1 ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಗಗನ್ (24) ಶಿಕ್ಷೆಗೊಳಗಾದವ.
ಪ್ರಕರಣ ನಡೆದು ಕೇವಲ 9 ತಿಂಗಳಿನಲ್ಲೇ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಎಫ್ಟಿಎಸ್ಸಿ-1 ನ್ಯಾಯಾಧೀಶ ವಿನಯ್ ದೇವರಾಜ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಐಪಿಸಿ ಸೆಕ್ಷನ್ 354 (ಸಿ) ಅಡಿಯಲ್ಲಿ ಆರೋಪಿಗೆ 1 ವರ್ಷ ಸಾದಾ ಸಜೆ, 20 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಾದಾ ಶಿಕ್ಷೆ ಅನುಭವಿಸಲು ಸೂಚಿಸಿದೆ. ದಂಡದ ಮೊತ್ತದಲ್ಲಿ 10 ಸಾವಿರ ರೂ. ಮತ್ತು ಪ್ರತ್ಯೇಕವಾಗಿ 1 ಲಕ್ಷ ರೂ. ಹಣವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.
ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.
ಪ್ರಕರಣದ ಹಿನ್ನೆಲೆ:
ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ 2024ರ ಮಾ.10ರಂದು ರಾತ್ರಿ 8:45ರ ಸುಮಾರಿಗೆ ಅಪ್ರಾಪ್ತ ಬಾಲಕಿ ತನ್ನ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಆರೋಪಿ ಗಗನ್ (24) ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ಮೊಬೈಲ್ ಲೈಟ್ ಕಂಡು ಬಾಲಕಿ ಕೂಗಿದಾಗ ಅವರ ತಾಯಿ ಬಂದಿದ್ದರು. ಈ ವೇಳೆ ಆರೋಪಿ ಓಡಿಹೋಗಿ ತಪ್ಪಿಸಿಕೊಂಡಿದ್ದನು ಎಂದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಐಗಳಾದ ಗುರಪ್ಪ ಕಾಂತಿ ಮತ್ತು ರೇವಣ್ಣ ಸಿದ್ದಪ್ಪ ಜಿ ತನಿಖೆ ನಡೆಸಿದ್ದರು. ಬಳಿಕ ಪ್ರಕರಣ ಸಂಬಂಧ ಎಸ್ಐ ಸತೀಶ್ ಕೆ.ಎಸ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
Mangalore 24 year old youth gets life imprisonment by the Mangalore court for recording nude video of minor girl while having bath. The accused has been identified as Gagan.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm